ದರ್ಶನ್ ವಿರುದ್ಧ ಆಕ್ರೋಶ | ಶಿಕಾರಿಪುರದಲ್ಲಿ ಬೃಹತ್ ಪ್ರತಿಭಟನೆ
widespread protests in Shivamogga against actor Darshan. The All India Veerashaiva Lingayat Mahasabha Taluk Unit led a massive protest in Shikaripura yesterday.
![ದರ್ಶನ್ ವಿರುದ್ಧ ಆಕ್ರೋಶ | ಶಿಕಾರಿಪುರದಲ್ಲಿ ಬೃಹತ್ ಪ್ರತಿಭಟನೆ](https://malenadutoday.com/uploads/images/202406/image_870x_667254c35ff13.webp)
SHIVAMOGGA | MALENADUTODAY NEWS | Jun 19, 2024 ಮಲೆನಾಡು ಟುಡೆ
ನಟ ದರ್ಶನ್ ವಿರುದ್ಧ ಶಿವಮೊಗ್ಗದಲ್ಲಿಯು ಪ್ರತಿಭಟನೆ ವ್ಯಾಪಕವಾಗಿದೆ. ಇದಕ್ಕೆ ಪೂರಕ ಎಂಬಂತೆ ನಿನ್ನೆ ದಿನ ಶಿಕಾರಿಪುರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸಂಘಟನೆಗಳು ತಹಶೀಲ್ದಾರ್ ಮಲ್ಲೇಶಪ್ಪ ಬಿ. ಪೂಜಾರ್ ಅವರಿಗೆ ಮನವಿ ಸಲ್ಲಿಸಿದರು.
ರೇಣುಕಸ್ವಾಮಿಯನ್ನ ಹತ್ಯೆ ಮಾಡಿರುವುದು ಖಂಡನೀಯ. ರಾಜ್ಯ ಸರ್ಕಾರ ರೇಣುಕಸ್ಚಾಮಿ ಕೊಲೆ ಆರೋಪಿಗಳ ರಕ್ಷಣೆಗೆ ಮುಂದಾಗಬಾರದು. ತನಿಖೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಒತ್ತಡ ಹಾಕದೇ ನಿಷ್ಪಕ್ಷಪಾತ ತನಿಖೆಗೆ ಅವಕಾಶ ನೀಡಬೇಕು. ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಹಾಗೂ ಇತರರಿಗೆ ಗಲ್ಲು ಶಿಕ್ಷೆ ನೀಡಬೇಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಖಾಸಗಿ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ನೊಂದ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲುವುದಾಗಿ ಘೋಷಿಸಿದರು.
There have been widespread protests in Shivamogga against actor Darshan. The All India Veerashaiva Lingayat Mahasabha Taluk Unit led a massive protest in Shikaripura yesterday. The protesters gathered in front of the Taluk office and submitted a petition to Tahsildar Malleshppa B Poojar.