ಸ್ಪೀಕರ್​ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ! ಬಿಜೆಪಿ ಆಕ್ರೋಶಕ್ಕೆ ಕಾರಣವೇನು?

Protests in Shivamogga demanding Speaker's resignation What is the reason for the BJP's anger?ಸ್ಪೀಕರ್​ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ! ಬಿಜೆಪಿ ಆಕ್ರೋಶಕ್ಕೆ ಕಾರಣವೇನು?

ಸ್ಪೀಕರ್​ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ! ಬಿಜೆಪಿ ಆಕ್ರೋಶಕ್ಕೆ ಕಾರಣವೇನು?

KARNATAKA NEWS/ ONLINE / Malenadu today/ Jul 22, 2023 SHIVAMOGGA NEWS 

ವಿಧಾನಸಭೆಯಲ್ಲಿ ಬಿಜೆಪಿ ಶಾಸಕರನ್ನ ಅಮಾನತ್ತುಗೊಳಿಸಿರುವುದನ್ನ ಖಂಡಿಸಿ, ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು . ಮಾಜಿ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕೆ.ಎಸ್​​.ಈಶ್ವರಪ್ಪ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪರವರು ಸೇರಿದಂತೆ ವಿವಿಧ ಮುಖಂಡರು ಶಿವಪ್ಪನಾಯಕ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ನಡೆದುಕೊಂಡ ರೀತಿಯನ್ನು ಖಂಡಿಸಿದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಲಾಗಿದೆ ಆಂತಾ ಆರೋಪಿಸಿದರು. ಇನ್ನೂ ಸದನ ಕಲಾಪದ ನಡುವೆ ಸೋನಿಯಾ ಗಾಂಧಿಯವರನ್ನ ಭೇಟಿಯಾಗಲು ಹೋಗಿದ್ದ ಸ್ಪೀಕರ್​ರವರ ನಡೆಯನ್ನ ಶಾಸಕ ಎಸ್​.ಎನ್​ ಚನ್ನಬಸಪ್ಪ ಖಂಡಿಸಿದರು. ಅಲ್ಲದೆ ಸ್ಪೀಕರ್​ ಯುಟಿ ಖಾದರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ರು.

ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​