MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಇಲ್ಲಿನ ದೊಡ್ಡಗೊಪ್ಪೇನಹಳ್ಳಿ ನಿವಾಸಿ ಬಿ. ಜಗದೀಶ್ರವರ ಪುತ್ರ ಭರತ್ ಮೃತ ದುರ್ದೈವಿ
ಕಳೆದ ಫೆಬ್ರವರಿ 17 ರಂದು ರಾತ್ರಿ ಪಲ್ಸರ್ ವಾಹನದಲ್ಲಿಎನ್ ಹೆಚ್ 69 ರಲ್ಲಿ ತೆರಳುತ್ತಿದ್ದ ಭರತ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದ. ಘಟನೆಯಲ್ಲಿ ಹಿಂಬದಿ ಕುಳಿತಿದ್ದ ಇಬ್ಬರಿಗೂ ಸಹ ಗಾಯಗಳಾಗಿದ್ದವು. ಗಾಯಾಳುಗಳನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಫೆಬ್ರವರಿ 18 ರಂದು ಚಿಕಿತ್ಸೆ ಫಲಕಾರಿಯಾಗದೇ ಭರತ್ ಮೃತಪಟ್ಟಿದ್ಧಾನೆ. ಈ ಸಂಬಂಧ ಪೇಪರ್ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’