Saturday, 9 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಮತಕಳ್ಳತನ ಆರೋಪ: ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ – ಮೋದಿ ವಿರುದ್ಧ ರಾಹುಲ್, ಸಿದ್ದರಾಮಯ್ಯ, ಖರ್ಗೆ ವಾಗ್ದಾಳಿ

prathapa thirthahalli
Last updated: August 8, 2025 3:28 pm
Prathapa thirthahalli - content producer
Share
SHARE

Rahul gandhi ಬೆಂಗಳೂರು: ದೇಶದಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಪ್ರತಿಭಟನೆಗೂ ಮೊದಲು ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಸಂವಿಧಾನದ ಪುಸ್ತಕವನ್ನು ಹಿಡಿದು ಮಾತನಾಡಿದ ರಾಹುಲ್, ಇದು ಗಾಂಧೀಜಿ, ಅಂಬೇಡ್ಕರ್, ನೆಹರೂ, ಪಟೇಲ್, ಬಸವಣ್ಣ ಮತ್ತು ಫುಲೆಯಂತಹ ಮಹನೀಯರ ಧ್ವನಿಯನ್ನು ಒಳಗೊಂಡಿದೆ. “ಒಬ್ಬ ವ್ಯಕ್ತಿಗೆ ಒಂದು ಮತ” ಎಂಬ ಹಕ್ಕನ್ನು ಈ ಸಂವಿಧಾನ ನೀಡಿದೆ. ಆದರೆ, ಬಿಜೆಪಿಯವರು ಈ ಸಂವಿಧಾನದ ಮೇಲೆ ದಾಳಿ ಮಾಡಿ ಅದನ್ನು ಮುಗಿಸುವ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಲೋಕಸಭೆ ಚುನಾವಣೆಯ ನಂತರ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು ಅಚ್ಚರಿ ತಂದಿದೆ. ಏಕೆಂದರೆ, ಈ ಚುನಾವಣೆಯಲ್ಲಿ ಒಂದು ಕೋಟಿ ಹೊಸ ಮತದಾರರು ಮತ ಹಾಕಿದ್ದು, ಲೋಕಸಭೆ ಚುನಾವಣೆಯಲ್ಲಿ ಇವರೆಲ್ಲ ಮತ ಹಾಕಿರಲಿಲ್ಲ. ಇದರಿಂದ ಏನೋ ಷಡ್ಯಂತ್ರ ನಡೆದಿದೆ ಎಂದು ಆವಾಗಲೇ ಅನಿಸಿತು ಎಂದರು.

Rahul gandhi :  ಮಹದೇವಪುರದಲ್ಲಿ ಮತಗಳ್ಳತನದ ಗಂಭೀರ ಆರೋಪ:

ರಾಹುಲ್ ಗಾಂಧಿ ಕರ್ನಾಟಕದ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡುತ್ತಾ, ನಮ್ಮ ಆಂತರಿಕ ಸಮೀಕ್ಷೆಯ ಪ್ರಕಾರ ನಾವು 16 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ನಾವು ಗೆದ್ದಿದ್ದು ಕೇವಲ 9 ಕ್ಷೇತ್ರಗಳಲ್ಲಿ. ಆದ್ದರಿಂದ ನಾವು ಒಂದು ಕ್ಷೇತ್ರದ ಬಗ್ಗೆ ಆಳವಾಗಿ ಪರಿಶೀಲಿಸಿದಾಗ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡಮಟ್ಟದ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಮಹದೇವಪುರದಲ್ಲಿ 6.5 ಲಕ್ಷ ಮತಗಳ ಪೈಕಿ 1,00,250 ಮತಗಳು ಕಳುವಾಗಿವೆ. ಅಂದರೆ, ಪ್ರತಿ ಆರು ಮತಗಳಲ್ಲಿ ಒಂದು ಮತವನ್ನು ಕಳವು ಮಾಡಲಾಗಿದೆ ಎಂದು ಅವರು ಆರೋಪಿಸಿದರು.

ಒಬ್ಬ ವ್ಯಕ್ತಿಯೇ ನಾಲ್ಕೈದು ಮತಗಟ್ಟೆಗಳಲ್ಲಿ ಮತ ಹಾಕಿದ್ದಾರೆ, ನಕಲಿ ವಿಳಾಸ, ನಕಲಿ ಫೋಟೋ, ಹಾಗೂ ಒಂದೇ ವಿಳಾಸದಲ್ಲಿ 40-50 ಜನ ಇದ್ದು, ಇವರೆಲ್ಲ ಬಿಜೆಪಿ ಮುಖಂಡರ ಮನೆಗಳಲ್ಲಿ ವಾಸವಾಗಿದ್ದಾರೆ. ಇವೆಲ್ಲವುಗಳನ್ನು ಸೇರಿಸಿದರೆ 1,00,250 ಮತಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗವು ತಮ್ಮಿಂದ ಪ್ರಮಾಣಪತ್ರ ಕೇಳುತ್ತಿದ್ದು, ತಾವು ಸಂಸತ್ತಿನಲ್ಲಿ ಸಂವಿಧಾನದ ಮೇಲೆ ಪ್ರಮಾಣ ಮಾಡಿರುವುದರಿಂದ ಹೇಳುತ್ತಿರುವುದು ಸತ್ಯ ಎಂದರು. ಅಲ್ಲದೆ, ಚುನಾವಣಾ ಆಯೋಗವು ಎಲ್ಲ ಮತದಾರರ ಪಟ್ಟಿಯನ್ನು ಡಿಜಿಟಲ್ ರೂಪದಲ್ಲಿ ಮತ್ತು ಮತ ಚಲಾವಣೆಯ ವಿಡಿಯೋ ದಾಖಲೆಗಳನ್ನು ನೀಡಿದರೆ, ಅಕ್ರಮವನ್ನು ಸಾಬೀತುಪಡಿಸುವುದಾಗಿ ಸವಾಲು ಹಾಕಿದರು.

Rahul gandhi :  ಏಳು ಕ್ಷೇತ್ರಗಳಲ್ಲಿ ಮತ ಕದಿಯುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಈ ಪ್ರತಿಭಟನೆಯು ಕರ್ನಾಟಕದಿಂದ ಆರಂಭವಾಗಿದೆ. “ಒಬ್ಬ ವ್ಯಕ್ತಿಗೆ ಒಂದು ಮತ” ಎಂಬ ಸಂವಿಧಾನದ ಮೂಲಭೂತ ಹಕ್ಕನ್ನು ಕಿತ್ತುಕೊಳ್ಳುವ ಪ್ರಯತ್ನ ಮನುವಾದಿಗಳಿಂದ ನಡೆಯುತ್ತಿದೆ ಎಂದು ಆರೋಪಿಸಿದರು. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳು ಕಳವಾಗಿವೆ. ಕರ್ನಾಟಕದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದ್ದು, ಈಗ ಮತಗಳ್ಳತನಕ್ಕೂ ಮುಂದಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಏಳು ಕ್ಷೇತ್ರಗಳಲ್ಲಿ ಮತ ಕದಿಯುವ ಮೂಲಕ ಬಿಜೆಪಿ ಗೆಲುವು ಸಾಧಿಸಿದೆ. ನರೇಂದ್ರ ಮೋದಿ ಮತಗಳ್ಳತನದಿಂದ ಪ್ರಧಾನಿಯಾಗಿದ್ದು, ಅಧಿಕಾರದಲ್ಲಿ ಮುಂದುವರೆಯಲು ಅನರ್ಹರು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

Rahul gandhi :  ಮತದಾರನ್ನು ದುರುಪಯೋಗಪಡಿಸಿಕೊಂಡು ಮೋದಿ ದೇಶವನ್ನು ಆಳುತ್ತಿದ್ದಾರೆ :  ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಇದು “ಕಳ್ಳತನದ ಸರ್ಕಾರ”ವಾಗಿದ್ದು, ಅಧಿಕಾರದಲ್ಲಿ ಮುಂದುವರೆಯಲು ಯಾವುದೇ ಹಕ್ಕಿಲ್ಲ. ಮಹಾರಾಷ್ಟ್ರ, ಬಿಹಾರ ಮತ್ತು ಉತ್ತರ ಪ್ರದೇಶ ಸೇರಿ ಎಲ್ಲ ಕಡೆ ಮತದಾರರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮೋದಿ ದೇಶವನ್ನು ಆಳುತ್ತಿದ್ದಾರೆ. 2019ರ ಚುನಾವಣೆಯಲ್ಲಿ ತಾವು ಸೋತಿದ್ದರ ಹಿಂದೆಯೂ ಬೋಗಸ್ ವೋಟಿಂಗ್ ಕಾರಣವಾಗಿದೆ ಎಂದು ಖರ್ಗೆ ಹೇಳಿದರು. ಮುಂದಿನ ಸೋಮವಾರ, ಎಲ್ಲಾ ಸಂಸದರು ಕೇಂದ್ರ ಚುನಾವಣಾ ಆಯೋಗಕ್ಕೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದರು. ಚುನಾವಣಾ ಆಯೋಗ ಕೂಡ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಅವರು ಟೀಕಿಸಿದರು. ನಮ್ಮ ಮತದ ಹಕ್ಕನ್ನೇ ಕಸಿದುಕೊಂಡ ಮೇಲೆ ನಾವು ದೇಶದ ನಾಗರಿಕರೇ ಅಲ್ಲ ಎಂದು ಖರ್ಗೆ ಹೇಳಿದರು.

Rahul gandhi
Rahul gandhi
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article By raghavendra ಕೃಷಿ ಸಚಿವರು ಹಾಗೂ ಗೃಹ ಸಚಿವರನ್ನು ಭೇಟಿ ಮಾಡಿದ ಸಂಸದ ಬಿವೈ ರಾಘವೇಂದ್ರ ದೆಹಲಿಯಲ್ಲಿ ಒಬ್ಬರ ನಂತರ ಒಬ್ಬರು ಸಚಿವರನ್ನು ಭೇಟಿಯಾಗುತ್ತಿರುವ ಬಿವೈಆರ್​ : ಹೊಸ ಡಿಮ್ಯಾಂಡ್​
Next Article Power cut shivamogga ಆಗಸ್ಟ್​ 10 ರಂದು ವಿದ್ಯುತ್​ ವ್ಯತ್ಯಯ
Leave a Comment

Leave a Reply Cancel reply

Your email address will not be published. Required fields are marked *

You Might Also Like

ಪುರದಾಳು ಬಳಿಕ ಬೇಳೂರು ಗ್ರಾಮದಲ್ಲಿ ಕಾಡಾನೆಗಳ ದಾಳಿ | ಇಲ್ಲಿದೆಯಾ 20 ಕ್ಕೂ ಹೆಚ್ಚು WILD ELEPHANTS

By 13
fish merchant missing july 05
SHIVAMOGGA NEWS TODAYSHIKARIPURA

fish merchant missing july 05/ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿ ಅಬ್ದುಲ್ ಮುನಾಫ್ ನಾಪತ್ತೆ

By ajjimane ganesh
SHIVAMOGGA NEWS TODAY

ಕೊಪ್ಪಕ್ಕೆ ಹೋಗುತ್ತಿದ್ದ ಬಸ್‌ನಲ್ಲಿದ್ದ ಪ್ರಯಾಣಿಕನಿಗೆ ಹಾರ್ಟ್‌ ಅಟ್ಯಾಕ್‌, ಸಾವು | ಆಗುಂಬೆ ಬಳಿ ಘಟನೆ ಆಗಿದ್ದೇನು?

By 13

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಯುವ ಸವಿಷ್ಕಾರ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up