ತೀರ್ಥಹಳ್ಳಿ / ತಾಲ್ಲೂಕಿನ ಯಡೇಹಳ್ಳಿ ಕೆರೆಯ ಕೊಗೋಡು ಬಂಡೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲದೆ ಈ ರೇಡ್ನಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ತೀರ್ಥಹಳ್ಳಿಯ ಈ ಸುದ್ದಿಯನ್ನು ಸಹ ಓದಿ : ತೀರ್ಥಹಳ್ಳಿ : ಬೈಕ್ ತಗೊಂಡೋರು, ಕ್ಲಿಯರೆನ್ಸ್ ಲೆಟರ್ ಕೇಳಿದ್ದಕ್ಕೆ ಏನೆಲ್ಲಾ ಆಯ್ತು ಓದಿ
ಇಸ್ಪೀಟ್ ಆಟ / ಪೊಲೀಸ್ ಮಾಹಿತಿ ಮೇರೆಗೆ ರೇಡ್
ನಾಲ್ಕೈದು ಜನರು ಗುಂಪು ಕಟ್ಟಿಕೊಂಡು ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಪೊಲೀಸ್ ಇನ್ಫಾರ್ಮರ್ ಪಕ್ಕಾ ಮಾಹಿತಿ ನೀಡಿದ್ದರು. ಈ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಚಂದ್ರಪ್ಪ ಆರ್ ಸಿಬ್ಬಂದಿ ವೀರೇಂದ್ರ, ದೀಪಕ್ ಮತ್ತು ಸುದರ್ಶನ ಅವರೊಂದಿಗೆ ಮಧ್ಯಾಹ್ನ 03:30 ಗಂಟೆಗೆ ರೇಡ್ ಮಾಡಿದ್ದಾರೆ.
ರೇಡ್ನಲ್ಲಿ ಕಾರ್ಡ್ಸ್ ಆಡುತ್ತಿದ್ದ ಮೂವರು ಸಿಕ್ಕಿಬಿದ್ದಿದ್ದಾರೆ. ಮೂವರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕೃತ್ಯಕ್ಕೆ ಬಳಸಿದ್ದ 2280 ರೂಪಾಯಿ ನಗದು, 52 ಕಾರ್ಡ್ ಹಾಗೂ ಪ್ಲಾಸ್ಟಿಕ್ ಚೀಲವನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ನ್ಯಾಯಾಲಯದ ಅನುಮತಿ ಪಡೆದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಂಜ್ಞೆಯ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
