ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್ ಲೈನ್/ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಏನಿದು? ವಿವರ ಇಲ್ಲಿದೆ
Railway power line on tunga river bridge/ Good news for railway passengers
ಸರಿ ಸುಮಾರು 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲು ಮಾರ್ಗದ ವಿದ್ಯುದ್ದೀಕರಣ ಯೋಜನೆಗೆ ಕೇಂದ್ರ ಸರ್ಕಾರವು 25 ಕೋಟಿ ರೂ, ಮಂಜೂರು ಮಾಡಿತ್ತು. ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿತ್ತು. ಬೀರೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗವನ್ನು ವಿದ್ಯುದ್ದೀಕರಣಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದ್ದರಿಂದ ಕೇಂದ್ರ ಸರ್ಕಾರ, ಈ ಬಗ್ಗೆ ಸ್ಪಂದನೆ ನೀಡಿ 25 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿತ್ತು.
ಈ ಕಾಮಗಾರಿಯು ಸದ್ಯ ಶಿವಮೊಗ್ಗ ನಗರವನ್ನು ಸಹ ತಲುಪಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ನಗರದ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ರೈಲ್ವೆ ಸೇತುವೆಯ ಮೇಲೆ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ. ಕರೆಂಟ್ ಪೋಲ್ಗಳನ್ನು ಅಳವಡಿಸಲಾಗಿದ್ದು, ಅದಕ್ಕೆ ಲೈನ್ಗಳನ್ನು ಸಹ ಫಿಕ್ಸ್ ಮಾಡಲಾಗಿದೆ.
ರೈಲ್ವೆ ಇಲಾಖೆಯ ಸೆಂಟ್ರಲ್ ಆರ್ಗನೈಸೇಷನ್ ಫಾರ್ ರೈಲ್ವೆ ಎಲೆಕ್ಟ್ರಿಫಿಕೇಷನ್ ಸಂಸ್ಥೆ ಈ ಕಾಮಗಾರಿ ನಡೆಸ್ತಿದ್ದು, ಈ ಹಿಂದೆ ತಾಳಗುಪ್ಪದಲ್ಲಿಯು ವಿದ್ಯುದೀಕರಣದ ಕಾಮಗಾರಿ ವೇಗ ಪಡೆದುಕೊಂಡಿದ್ದರ ಬಗ್ಗೆ ಮಲೆನಾಡು ಟುಡೆ ಸುದ್ದಿ ಮಾಡಿತ್ತು.
ನಿರೀಕ್ಷೆಯಂತೆ ಕಾಮಗಾರಿ ಅಂತಿಮ ಹಂತ ತಲುಪುವ ಸಾಧ್ಯತೆ ಇದ್ದು, ಈ ಮಾರ್ಗದಲ್ಲಿ ಓಡಾಡುವ ರೈಲುಗಳು ವಿದ್ಯುತ್ ಚಾಲಿತ ಇಂಜಿನ್ಗಳ ಮೂಲಕ ಸಂಚರಿಸಲಿವೆ. ಇದರಿಂದ ಟ್ರೈನ್ಗಳ ವೇಗ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com