ಬಿಸಿಲ ಝಳದ ನಡುವೆ ಸಂಜೆ ಹೊತ್ತಿಗೆ ತಣ್ಣಗಿನ ಅನುಭವ ನೀಡುತ್ತಿದ್ದ ಮಳೆ ಇವತ್ತು ಬೆಳಗ್ಗೆಯಿಂದಲೇ ಶಿವಮೊಗ್ಗ ಜಿಲ್ಲೆಯ ಹಲವೆಡೆ ಸುರಿಯುತ್ತಿದೆ. ಬೆಳಗಿನ ಜಾವದಿಂದಲೇ ಆರಂಭವಾದ ಮಳೆ ಸಿಟಿಯನ್ನು ಥಂಡಿ, ಚಂಡಿಯಾಗಿಸಿದೆ. ಹವಾಮಾನ ವೈಪರಿತ್ಯದಿಂದಾಗಿ ರಾಜದಾನಿ ಬೆಂಗಳೂರಿನಲ್ಲಿ ವಿಶೇಷವಾಗಿ ಮಳೆಯಾಗುತ್ತಿದೆ. ಇದರ ಬೆನ್ನಲ್ಲೆ ಶಿವಮೊಗ್ಗದಲ್ಲಿಯು ಮಳೆಯಾಗುತ್ತಿದೆ. ಗಾಳಿ, ಗುಡುಗು, ಸಿಡಿಲು ಆರ್ಭಟವಿಲ್ಲದೆ, ಜಿಟಿಜಟಿಯಾಗಿ ಮಳೆ ಸುರಿಯುತ್ತಿದೆ.
ಬೇಸಿಗೆಯ ಬಿಸಿಲಿನ ತಾಪಮಾನ ನಿನ್ನೆ ದಿನ ಶಿವಮೊಗ್ಗದಲ್ಲಿ ರಣ ರಣ ಎನ್ನುವಂತೆ ಮಾಡಿತ್ತು. ನಿನ್ನೆ ದಿನ ಶಿವಮೊಗ್ಗ ಮೈಸೂರು , ದಾವಣಗೆರೆಯಲ್ಲಿ 33-36°C ತಾಪಮಾನವಿತ್ತು. ಆದರೆ ಇವತ್ತು ಬೆಳಗ್ಗೆ ಮಳೆಯ ಆಗಮನದಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ.
ಹವಾಮಾನ ಇಲಾಖೆ ಮುನ್ಸೂಚನೆ
ಇನ್ನೂ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಇವತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ನಾಳೆದಿನ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಆಚೆ ನಾಡಿದ್ದು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವಾಮಾನವಿರುತ್ತದೆ.