Ramanagara ಶಿವಮೊಗ್ಗ: ರಾಮನಗರ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿಯಮರಿಸ್ವಾಮಿ ಹೆಚ್.ಎಮ್. ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಶಿವಮೊಗ್ಗ: ಉದ್ಯೋಗ ಹುಡುಕ್ತಿದ್ದೀರ, ಹಾಗಾದ್ರೆ ಈ ಸುದ್ದಿ ಓದಿ
ಮುನಿಸ್ವಾಮಿ ಅವರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ಕಿಟಕಿಯ ಕಂಬಿಗೆ ತಮ್ಮ ಪ್ಯಾಂಟನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಶೌಚಾಲಯದ ಸ್ವಚ್ಛತಾ ಸಿಬ್ಬಂದಿ ಅಲ್ಲಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
