ಶಿವಮೊಗ್ಗ : KSRTC ಬಸ್​ ನಿಲ್ದಾಣದ ಶೌಚಾಲಯದ ಬಳಿ ವ್ಯಕ್ತಿ ಆತ್ಮ*ಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Ramanagara Man Dies by Suicide in Shivamogga
Ramanagara Man Dies by Suicide in Shivamogga

Ramanagara ಶಿವಮೊಗ್ಗ: ರಾಮನಗರ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ಕೆಎಸ್​ಆರ್​​ಟಿಸಿ ಬಸ್​ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿಯಮರಿಸ್ವಾಮಿ ಹೆಚ್.ಎಮ್. ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ಶಿವಮೊಗ್ಗ: ಉದ್ಯೋಗ ಹುಡುಕ್ತಿದ್ದೀರ, ಹಾಗಾದ್ರೆ ಈ ಸುದ್ದಿ ಓದಿ

ಮುನಿಸ್ವಾಮಿ ಅವರು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದ ಕಿಟಕಿಯ ಕಂಬಿಗೆ ತಮ್ಮ ಪ್ಯಾಂಟನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಶೌಚಾಲಯದ ಸ್ವಚ್ಛತಾ ಸಿಬ್ಬಂದಿ ಅಲ್ಲಿಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor