Rambhapuri Jagadguru / ಮಲೆನಾಡು ಟುಡೆ ಸುದ್ದಿ / ಬಾಳೆಹೊನ್ನೂರು / ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಆಗಸ್ಟ್ ತಿಂಗಳ ಪ್ರವಾಸದ ವಿವರಗಳನ್ನು ಪ್ರಕಟಿಸಲಾಗಿದೆ. ಈ ಕುರಿತು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಬಾಳನಗೌಡ್ರ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಆಗಸ್ಟ್ 2 ರಂದು ಬೆಂಗಳೂರಿನ ಭಾರತ ಧರ್ಮ ನಗರದಲ್ಲಿ ಇಷ್ಟಲಿಂಗ ಮಹಾಪೂಜೆ…
Rambhapuri Jagadguru / ಮಲೆನಾಡು ಟುಡೆ ಸುದ್ದಿ / ಬಾಳೆಹೊನ್ನೂರು / ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಆಗಸ್ಟ್ ತಿಂಗಳ ಪ್ರವಾಸದ ವಿವರಗಳನ್ನು ಪ್ರಕಟಿಸಲಾಗಿದೆ. ಈ ಕುರಿತು ಶ್ರೀ ಜಗದ್ಗುರು ರಂಭಾಪುರಿ ಪೀಠದ ವಾರ್ತಾ ಸಂಯೋಜನಾಧಿಕಾರಿ ಬಾಳನಗೌಡ್ರ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ.
ಆಗಸ್ಟ್ 2 ರಂದು ಬೆಂಗಳೂರಿನ ಭಾರತ ಧರ್ಮ ನಗರದಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಸಮಾರಂಭ ಜರುಗಲಿದೆ. ಆಗಸ್ಟ್ 3 ರಿಂದ 5 ರವರೆಗೆ ಹರಿಹರದಲ್ಲಿ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಸಮಾರಂಭ ಏರ್ಪಡಿಸಲಾಗಿದೆ. ಆಗಸ್ಟ್ 6 ರಿಂದ 10 ರವರೆಗೆ ದಾವಣಗೆರೆಯಲ್ಲಿ ಇಷ್ಟಲಿಂಗ ಮಹಾಪೂಜಾ ಮತ್ತು ಜನಜಾಗೃತಿ ಧರ್ಮ ಸಮಾರಂಭ ನಡೆಯಲಿದೆ. ಅದೇ ರೀತಿ ಆಗಸ್ಟ್ 11 ರಂದು ಹರಿಹರ ತಾಲ್ಲೂಕಿನ ಹನಗವಾಡಿಯಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭವನ್ನು ಜಗದ್ಗುರುಗಳು ನಡೆಸಲಿದ್ದಾರೆ.
- ಆಗಸ್ಟ್ 12 ರಂದು ಚನ್ನಗಿರಿ ತಾಲ್ಲೂಕಿನ ತಾವರೆಕೆರೆ ಶಿಲಾಮಠದಲ್ಲಿ ನಡೆಯಲಿರುವ ಲಿಂಗೈಕ್ಯ ಸಿದ್ದಲಿಂಗ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರುಗಳು ವಹಿಸಲಿದ್ದಾರೆ.
- ಆಗಸ್ಟ್ 13 ರಂದು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ತಮ್ಮ 35 ನೇ ವರ್ಷದ ಶ್ರಾವಣ ತಪೋನುಷ್ಠಾನವನ್ನು ಆರಂಭಿಸಲಿದ್ದಾರೆ. ಆಗಸ್ಟ್ 15 ರಂದು ಬೆಳಿಗ್ಗೆ ಶ್ರೀ ಪೀಠದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
- ಆಗಸ್ಟ್ 16 ರಂದು ಶ್ರೀ ಪೀಠದಲ್ಲಿ ಶ್ರೀಮದ್ ರಂಭಾಪುರಿ ಶಿವಾನಂದ ಜಗದ್ಗುರುಗಳ ಲಿಂಗಾಂಗ ಸಾಮರಸ್ಯದ ಪುಣ್ಯ ಸ್ಮರಣೆ ಜರುಗಲಿದೆ.
- ಆಗಸ್ಟ್ 20 ರಂದು ಶ್ರೀಮದ್ ರಂಭಾಪುರಿ ವೀರರುದ್ರ ಮುನಿ ಜಗದ್ಗುರುಗಳ ಪುಣ್ಯ ಸ್ಮರಣೋತ್ಸವ ಸಮಾರಂಭ ನಡೆಯಲಿದ್ದು, ಸೆಪ್ಟೆಂಬರ್ 11 ರಂದು ಶ್ರಾವಣ ತಪೋನುಷ್ಠಾನ ಮಂಗಲ ಸಮಾರಂಭದ ಸಾನ್ನಿಧ್ಯವನ್ನು ಶ್ರೀಗಳು ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
