rastra bhakta balaga ಶಿವಮೊಗ್ಗ: ವಸತಿ ಹಗರಣ, ಮುಸ್ಲಿಂ ಮೀಸಲಾತಿ ವಿರುದ್ಧ ಈಶ್ವರಪ್ಪ ನೇತೃತ್ವದಲ್ಲಿ ‘ರಾಷ್ಟ್ರಭಕ್ತರ ಬಳಗ’ದ ಬೃಹತ್ ಪ್ರತಿಭಟನೆ
Shivamogga News | KS Eshwarappa Protest | Housing Scam Karnataka | Muslim Reservation Row |
ಶಿವಮೊಗ್ಗ, ಜೂನ್ 25 (ಮಲೆನಾಡು ಟುಡೆ ಸುದ್ದಿ): ರಾಜೀವ್ ಗಾಂಧಿ ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಹಾಗೂ ವಸತಿ ಯೋಜನೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿಯನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಪ್ರಸ್ತಾವಿತ ನಿರ್ಧಾರವನ್ನು ಖಂಡಿಸಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನಾಯಕತ್ವದಲ್ಲಿ ‘ರಾಷ್ಟ್ರಭಕ್ತರ ಬಳಗ’ ಇಂದು ಶಿವಮೊಗ್ಗದ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿತು.
ನಗರದ ರಾಮಣ್ಣಶ್ರೇಷ್ಠಿ ಪಾರ್ಕ್ನಿಂದ ಶಿವಪ್ಪನಾಯಕ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಈ ವೇಳೆ, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನಾಕಾರರು, ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಎಂದು ಬಲವಾಗಿ ಒತ್ತಾಯಿಸಿದರು. ಸರ್ಕಾರ ಹಾಗೂ ಸಚಿವರ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತಮ್ಮ ವಿರೋಧವನ್ನು ಪ್ರದರ್ಶಿಸಿದರು.

ಈಶ್ವರಪ್ಪರಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ (Eshwarappa Slams Siddaramaiah | Karnataka Politics): rastra bhakta balaga
ಪ್ರತಿಭಟನೆಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತು ಹಿಂದೂಗಳನ್ನು ತುಳಿಯುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತೀವ್ರವಾಗಿ ಟೀಕಿಸಿದರು. ಸಿದ್ದರಾಮಯ್ಯ ಅವರಿಗೆ “ಕಣ್ಣು, ಕಿವಿ, ಹೃದಯ ಕೂಡ ಇಲ್ಲ” ಎಂದು ಆಕ್ರೋಶದಿಂದ ನುಡಿದ ಈಶ್ವರಪ್ಪ, ಹಿಂದೂ ಸಮಾಜ ಎಂದಿಗೂ ಇದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಮುಸ್ಲಿಮರಿಗೆ ಶೇ.15ರಷ್ಟು ಮೀಸಲಾತಿ ಹೆಚ್ಚಳ ಮಾಡುವ ಸರ್ಕಾರದ ಕ್ರಮಕ್ಕೆ ತಮ್ಮ ವಿರೋಧವಿದೆ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು. “ನಾವು ಸಹಿ ಸಂಗ್ರಹ ಅಭಿಯಾನ ನಡೆಸಿ ರಾಜ್ಯಪಾಲರಿಗೆ ಸಲ್ಲಿಸುತ್ತೇವೆ. ಯಾವುದೇ ಕಾರಣಕ್ಕೂ ಈ ಮೀಸಲಾತಿಯನ್ನು ಜಾರಿಗೆ ತರಲು ಬಿಡುವುದಿಲ್ಲ. ಇದು ಹಿಂದೂ ರಾಷ್ಟ್ರ. ಕಾಂಗ್ರೆಸ್ ಇದನ್ನು ಮುಸ್ಲಿಂ ರಾಷ್ಟ್ರ ಮಾಡಲು ಹೊರಟಿದೆ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಘೋಷಿಸಿದರು.
“ಕೋಮುವಾದಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಆದರೆ, ಯಾರೋ ಒಬ್ಬ ಮುಸ್ಲಿಂ ವ್ಯಕ್ತಿ ಸಾವನ್ನಪ್ಪಿದರೆ ಸಚಿವ ಯು.ಟಿ. ಖಾದರ್ ಕಣ್ಣೀರು ಹಾಕಿಕೊಂಡು ಓಡಿ ಬರುತ್ತಾರೆ, ಆದರೆ ಹಿಂದೂ ಕಾರ್ಯಕರ್ತರು ಮೃತಪಟ್ಟರೆ ಅವರು ಸುಳಿಯುವುದಿಲ್ಲ” ಎಂದು ಈಶ್ವರಪ್ಪ ಟೀಕಿಸಿದರು. ಹಿಂದೆ ಅಹಿಂದ ಮತ್ತು ದಲಿತರ ಬಗ್ಗೆ ಮಾತನಾಡುತ್ತಿದ್ದವರು ಈಗ ಮುಸಲ್ಮಾನರ ಬಗ್ಗೆ ಮಾತ್ರ ಮಾತನಾಡುತ್ತಿದ್ದಾರೆ. ಮುಸ್ಲಿಂರ ಬೆಂಬಲದಿಂದಲೇ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿರುವ ಸರ್ಕಾರ, ಇದೇ ಕಾರಣಕ್ಕಾಗಿ ಮೀಸಲಾತಿ ನೀಡಲು ಮುಂದಾಗಿದೆ. “ನಮ್ಮ ಪ್ರಾಣ ಹೋದರೂ ಮೀಸಲಾತಿ ಕೊಡಲು ಬಿಡುವುದಿಲ್ಲ” ಎಂದು ಅವರು ಪುನರುಚ್ಚರಿಸಿದರು.
rastra bhakta balaga

ಮುಸ್ಲಿಂ ಮಕ್ಕಳ ಮದುವೆಗೆ ‘ಶಾದಿ ಭಾಗ್ಯ’ ನೀಡುತ್ತಾರೆ, ಆದರೆ ನಮ್ಮ ಮಕ್ಕಳ ಮದುವೆಗೆ ಹಣ ಏಕೆ ಕೊಡುವುದಿಲ್ಲ ಎಂದು ಪ್ರಶ್ನಿಸಿದ ಈಶ್ವರಪ್ಪ, ಹಿಂದೂ ಧರ್ಮವನ್ನು ಕಾಪಾಡುವ ಸರ್ಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. ತಮ್ಮ ಹೋರಾಟ ನಿರಂತರವಾಗಿರುತ್ತದೆ ಮತ್ತು “ಜೈಲ್ ಬರೋವರೆಗೂ ಹೋರಾಟ ಮಾಡುತ್ತೇವೆ” ಎಂದು ಕೆ.ಎಸ್. ಈಶ್ವರಪ್ಪ ಘೋಷಣೆ ಮಾಡಿದರು.
ಇನ್ನಷ್ಟು ಸುದ್ದಿಗಳಿಗಾಗಿ : malendutoday.com /
rastra bhakta balaga