ಮನೆ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ ಎಂದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ | ವಿಶೇಷ ಏನು ಗೊತ್ತಾ?!

The district administration has taken an important decision regarding the celebration of Kannada Rajyotsava ಕನ್ನಡ ರಾಜ್ಯೋತ್ಸವದ ಆಚರಣೆ ಸಂಬಂಧ ಜಿಲ್ಲಾಡಳಿತ ಮಹತ್ವದ ತೀರ್ಮಾನ ತೆಗೆದುಕೊಂಡಿದೆ

ಮನೆ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ ಎಂದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ | ವಿಶೇಷ ಏನು ಗೊತ್ತಾ?!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS

SHIVAMOGGA | ಕರ್ನಾಟಕ ರಾಜ್ಯೋತ್ಸವ ವಿಶಿಷ್ಟ ಆಚರಣೆಗೆ ಶಿವಮೊಗ್ಗ ಜಿಲ್ಲಾಡಳಿತ ಮುಂದಾಗಿದೆ. ಈ ಸಂಬಂಧ ನಿನ್ನೆ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ. ಅಲ್ಲದೆ ಇದೇ ವೇಳೆ ನವೆಂಬರ್ 01 ರಂದು ಜಿಲ್ಲೆಯಾದ್ಯಂತ ಎಲ್ಲಾ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದ ರಂಗೋಲಿ ಬಿಡಿಸುವಂತೆ ಮನವಿ ಮಾಡಿದ್ದಾರೆ 

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದ್ದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ಸ್ವರೂಪವನ್ನು ಸಿದ್ದಪಡಿಸಲಾಗಿದೆ.

READ : ಶಿವಮೊಗ್ಗದಲ್ಲಿ ಹೆಚ್ಚಿದ ಡೆಂಗ್ಯು, ಚಿಕನ್​ ಗುನ್ಯಾ! ಸಾರ್ವಜನಿಕರಿಕೆ ಜಿಲ್ಲಾಡಳಿತ ನೀಡಿದ ಎಚ್ಚರಿಕೆಗಳೇನು? ಇಲ್ಲಿದೆ ವಿವರ

ನವೆಂಬರ್ 01 ರ ಬೆಳಿಗ್ಗೆ 9 ಗಂಟೆಗೆ ಆಕಾಶವಾಣಿಯಲ್ಲಿ ನಾಡಗೀತೆ ಪ್ರಸಾರ ಮಾಡಲಾಗುವುದು. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರೀಕರು ಎದ್ದು ನಿಂತು ಗೌರವ ಸಲ್ಲಿಸಲು ತೀರ್ಮಾನಿಸಲಾಗಿದೆ

ನವೆಂಬರ್ 01 ರ ಸಂಜೆ 5 ಗಂಟೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳ ಮೈದಾನಗಳಲ್ಲಿ ಕೆಂಪು ಮತ್ತು ಹಳದಿ ಬಣ್ಣದ ಗಾಳಿ ಪಟಗಳನ್ನು ಆಕಾಶಕ್ಕೆ ಹಾರಿ ಬಿಡುವ ಮೂಲಕ ಸುವರ್ಣ ಸಂಭ್ರಮ ಗಾಳಿ ಪಟ ಉತ್ಸವಕ್ಕೆ ಸಿದ್ದತೆ ನಡೆಸಲಾಗಿದೆ.  

ನವೆಂಬರ್ 01 ರಂದು ಸಂಜೆ 7 ಗಂಟೆಗೆ ಜಿಲ್ಲೆಯ ಎಲ್ಲಾ ಮನೆ-ಮನೆಗಳ ಮುಂದೆ, ಕಚೇರಿಗಳ ಮುಂದೆ ಹಾಗೂ ಅಂಗಡಿ-ಮಳಿಗೆಗಳ ಮುಂದೆ ಹಣತೆ(ದೀಪ) ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸಲು ಸಿದ್ದತೆ ನಡೆಸಲಾಗಿದೆ  

ಜಿಲ್ಲೆಯ ಸಮಸ್ತ ನಾಗರೀಕರು ಹಾಗೂ ಕನ್ನಡ ಪರ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ನಾಡು-ನುಡಿಯ ಅಭಿಮಾನದೊಂದಿಗೆ ಪ್ರತಿಯೊಬ್ಬರು ಈ ಎಲ್ಲ ಅಂಶಗಳನ್ನು ಅಳವಡಿಸಿಕೊಂಡು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ