ಪ್ರಯಾಣಿಕರಲ್ಲಿ ವಿನಂತಿ! ಫೆಬ್ರವರಿ 26 ಮತ್ತು 27 ಕೆಎಸ್​ಆರ್​ಟಿಸಿ ಬಸ್ ಸಂಚಾರಲ್ಲಿ ವ್ಯತ್ಯಯ! ಕಾರಣ ಇಲ್ಲಿದೆ

Request to passengers! KSRTC bus services disrupted on February 26 and 27 Here's why

ಪ್ರಯಾಣಿಕರಲ್ಲಿ ವಿನಂತಿ!  ಫೆಬ್ರವರಿ 26 ಮತ್ತು 27 ಕೆಎಸ್​ಆರ್​ಟಿಸಿ ಬಸ್ ಸಂಚಾರಲ್ಲಿ ವ್ಯತ್ಯಯ! ಕಾರಣ ಇಲ್ಲಿದೆ

 MALENADUTODAY.COM | SHIVAMOGGA  | #KANNADANEWSWEB

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇದೇ ಫೆಬ್ರವರಿ 27 ಕ್ಕೆ  ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಮಾರಂಭಕ್ಕೆ, ನಾಗರಿಕರನ್ನು ಕರೆತರಲು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ 200 ಬಸ್​ಗಳನ್ನು  ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ವಿಭಾಗದಿಂದ ನೂರಾರು ಬಸ್ ಗಳನ್ನು ಬಾಡಿಗೆ ಪಡೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 26 ಹಾಗೂ 27 ರಂದು ಜಿಲ್ಲೆಯಾದ್ಯಂತ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಸಂಚಾರದಲ್ಲಿ ಅಸ್ತವ್ಯಸ್ತವಾಗಲಿದೆ.

READ : ಆತಂಕ ಮೂಡಿಸಿದ ಕೆಂಜಿಗಾಪುರ ಭಟ್ಟರ ಮನೆಯ ರಾಬರಿ ಕೇಸ್!ಒಬ್ಬರೇ ಟಾರ್ಗೆಟ್! ಒಂದೇ ವಾರದಲ್ಲಿ 2 ಸಲ ರಾಬರಿ ₹5 ಲಕ್ಷಕ್ಕೂ ಹೆಚ್ಚು ರಾಬರಿ! ಸಾಗರ ಪೊಲೀಸರಿಗೆ ಸವಾಲಾಯ್ತಾ ಕೇಸ್​

ಈ ಸಂಬಂಧ ಕೆಎಸ್​ಆರ್​ಟಿಸಿ ಪ್ರಕಟಣೆಯನ್ನು ನೀಡಿದ್ದು, ಇದೇ  ಫೆಬ್ರವರಿ 26 ರ ಮಧ್ಯಾಹ್ನದಿಂದ 27 ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಹಕರಿಸುವಂತೆ’ ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #KSRTC #MODIPROGRAM #SHIVAMOGGA AIRPORT