ಐಎಎಸ್ ಪರೀಕ್ಷೆ ಪಾಸಾದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಡಿಸಿಎಫ್​ ಪುತ್ರಿ

Retired DCF's daughter, who had served in Shimoga, clears IAS exam

ಐಎಎಸ್ ಪರೀಕ್ಷೆ ಪಾಸಾದ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಡಿಸಿಎಫ್​ ಪುತ್ರಿ

KARNATAKA NEWS/ ONLINE / Malenadu today/ May 23, 2023 SHIVAMOGGA NEWS

ಶಿವಮೊಗ್ಗ, ಜಿಲ್ಲೆಯಲ್ಲಿ ಡಿಸಿಎಫ್​ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಐಎಂ ನಾಗರಾಜ್​ರವರ ಪುತ್ರಿ ಐಎನ್​ ಮೇಘನಾ  ಕೇಂದ್ರ ಲೋಕಾಸೇವಾ ಆಯೋಗ ನಡೆಸುವ ಯುಪಿಎಸ್​ಸಿ ಪರೀಕ್ಷೆಯಲ್ಲಿ  ಪಾಸ್ ಆಗಿದ್ದಾರೆ. ಇವತ್ತು ಅವರ ಫಲಿತಾಂಶ ಹೊರಬಿದ್ದಿದ್ದು 617 ರ್ಯಾಂಕ್ ಪಡೆದಿದ್ದಾರೆ. 

ಈ ಹಿಂದೆಯು ಕಳೆದ ಬಾರಿ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದ ಮೇಘನಾ ಸಂದರ್ಶನ ಎದುರಿಸಿದ್ದರು. ಇದು ಅವರ ಎರಡನೇ ಪ್ರಯತ್ನವಾಗಿದೆ. ಬೆಂಗಳೂರಲ್ಲಿರುವ  ಇನ್‌ಸೈಟ್ಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ತರಬೇತಿ  ಅವರ ತರಭೇತಿ ಪಡೆದಿದ್ಧಾರೆ. 

ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬೆಂಗಳೂರಿನ  ಬಿಎಂಎಸ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಮುಗಿಸಿದ್ದಾರೆ. ಇನ್ನೂ ಮಗಳ ಸಾಧನೆಗೆ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದು, ಅಧಿಕಾರಿಯಾಗಿ ಹೊರಹೊಮ್ಮುವ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. 

ರೈಲ್ವೆ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸುದ್ದಿ:  ಅರಸಾಳು, ಹಾರ್ನಳ್ಳಿಯಲ್ಲಿ ರೈಲು ನಿಲ್ಲಿಸ್ತಾರಾ? ಶಿವಮೊಗ್ಗಕ್ಕೂ ಬರುತ್ತಾ ವಂದೆ ಭಾರತ್ ಟ್ರೈನ್​​ ? ಶಿವಮೊಗ್ಗ -ಬೆಂಗಳೂರು-ಮೈಸೂರು ಟ್ರೈನ್​ ಟೈಮಿಂಗ್ಸ್​ ಬದಲಾಗುತ್ತಾ!?

ಶಿವಮೊಗ್ಗ/ ದಿನಾಂಕ:22.05.2023 ರಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆಯ ಮಹಾ ಪ್ರಬಂಧಕ  ಸಂಜೀವ್ ಕಿಶೋರ್   ರೈಲ್ವೆ ಅಧಿಕಾರಿಗಳಾದ ಹೆಚ್.ಎಂ. ದಿನೇಶ್, CPTM,  ಶ್ರೀಧರ್ ಮೂರ್ತಿ, IDD, GoK,  ಸಂತೋಷ್ ಹೆಗಡೆ, ಸೆಕ್ರೆಟರಿ,   ಆಶೀಷ್ ಪಾಂಡೆ, GM, ನೈರುತ್ಯ ರೈಲ್ವೆ, ಹುಬ್ಬಳ್ಳಿ ಹಾಗೂ  ಆನಂದ ಭಾರತಿ, CE, SWR  ಒಳಗೊಂಡ ಅಧಿಕಾರಿಗಳ ಜೊತೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಈ ವೇಳೆ ಚರ್ಚಿಸಲಾದ ಅಂಶಗಳು ಇಲ್ಲಿದೆ 

ಶಿವಮೊಗ್ಗ- ಭದ್ರಾವತಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಯಾವಾಗ ಮುಗಿಯುತ್ತೆ! ಶಿವಮೊಗ್ಗದಲ್ಲಿ ವಂದೆ ಭಾರತ್​ ಟ್ರೈನ್​ ನಿರ್ವಹಣೆ?

  1. ತಾಳಗುಪ್ಪ, ಶಿವಮೊಗ್ಗ ನಗರ, ಸಾಗರ ರೈಲ್ವೆ ನಿಲ್ದಾಣಗಳ ಆಧುನೀಕರಣ ಕಾಮಗಾರಿ ಶೀಘ್ರವೇ ಕೈಗೊಳ್ಳುವಂತೆ ಸಂಸದರು ಒತ್ತಾಯಿಸಿದ್ಧಾರೆ. ರೂ. 22.5 ಕೋಟಿಗಳ ವೆಚ್ಚದಲ್ಲಿ ತಾಳಗುಪ್ಪ ರೈಲ್ವೆ ನಿಲ್ದಾಣವನ್ನು, ರೂ. 19.28 ಕೋಟಿ ರೂಗಳ ವೆಚ್ಚದಲ್ಲಿ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣವನ್ನು ಮತ್ತು ರೂ. 21.10 ಕೋಟಿ ರೂ.ಗಳ ವೆಚ್ಚದಲ್ಲಿ ಸಾಗರ ರೈಲ್ವೆ ನಿಲ್ದಾಣವನ್ನು ಹಾಗೂ ರೂ. 33.00 ಕೋಟಿಗಳ ವೆಚ್ಚದಲ್ಲಿ ಶಿವಮೊಗ್ಗ ಗೂಡ್ಸ್ ಯಾರ್ಡನ್ನು ಅಭಿವೃದ್ಧಿಪಡಿಸಲಾಗುತ್ತಿದೆ. 

ರುಂಡ ಮುಂಡ ಬೇರೆ ಮಾಡಿ ಗೆಳೆಯನನ್ನೆ ಸಾಯಸಿದ್ದ ಕೊಲೆ ಆರೋಪಿಗಳು ಗಲ್ಲು ಶಿಕ್ಷೆಯಿಂದ ಪಾರಾಗಿದ್ದು ಹೇಗೆ ಗೊತ್ತಾ! ಶಿವಮೊಗ್ಗದಲ್ಲಿ ನಡೆದಿದ್ದ ಶುಂಠಿ ವ್ಯಾಪಾರಿ ಮರ್ಡರ್ ಸ್ಟೋರಿ! JP Flash back

  1. ಶಿವಮೊಗ್ಗ ಗೂಡ್ಸ್ ಯಾರ್ಡನಲ್ಲಿ ಅಗತ್ಯ ಮೂಲ ಸೌಕರ್ಯವನ್ನು ಹೆಚ್ಚಿಸುವ ಮೂಲಕ ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರ, ಪಡಿತರ ಧಾನ್ಯ, ಸಿಮೆಂಟ್, ಕಬ್ಬಿಣ ಮತ್ತಿತರ ಅಗತ್ಯ ವಸ್ತುಗಳನ್ನು ಶೀಘ್ರವಾಗಿ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಸಮಲೋಚಸಿಲಾಯ್ತು

  1. ತಾಳಗುಪ್ಪ - ತಡಸ – ಹೊನ್ನಾವರ - ಶಿರಸಿ - ಹುಬ್ಬಳ್ಳಿ ನೂತನ ರೈಲ್ವೆ ಮಾರ್ಗ ಯೋಜನೆಯ - ಸರ್ವ ಕಾಮಗಾರಿಯು ಪೂರ್ಣಗೊಂಡಿದ್ದು, ನೈರುತ್ಯ ರೈಲ್ವೆಯು ಸರ್ವೆ ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಲಾಗಿದೆ. ಸಂಸದರು ಈ ಯೋಜನೆಯನ್ನು ಮಂಜೂರು ಮಾಡಲು ಮಾನ್ಯ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರನ್ನು ಈಗಾಗಲೆ ಕೋರಿದ್ದು ನೈರುತ್ಯ ರೈಲ್ವೆಯಿಂದಲು ಸಹ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಯಿತು.

ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ ! ಮೊದಲ ಹಂತ ಯಾವಾಗ ಪೂರ್ಣಗೊಳ್ಳುತ್ತೆ! ಸಂಸದರ ಪ್ರಕಟಣೆಯಲ್ಲಿ ಏನಿದೆ!

  1. ಅರಸಾಳು ಮತ್ತು ಹಾರನಹಳ್ಳಿಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಯನ್ನು ಮಾಡಲು ಮಾನ್ಯ ಸಂಸದರು ಒತ್ತಾಯಿಸಿದರು.ಈ ಕುರಿತಂತೆ ಅಗತ್ಯ ಕ್ರಮಕೈಗೊಳ್ಳುವುದಾಗಿ ನೈರುತ್ಯ ರೈಲ್ವೆಯವರು ತಿಳಿಸಿದ್ದಾರೆ. 

  1. ಮಾನ್ಯ ಸಂಸದರು ಬೆಂಗಳೂರು ಹಾಗು ಶಿವಮೊಗ್ಗ ನಗರಗಳ ನಡುವೆ ಒಂದೇ ಭಾರತ ರೈಲು ಸೇವೆಯನ್ನು ಆರಂಭಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

  1. ಶಿವಮೊಗ್ಗ - ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾ ಪಟ್ಟಿಯಲ್ಲಿ ಕೆಲ ಸಣ್ಣ ಪುಟ್‌ಟ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಈ ರೈಲುಗಳ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವಂತೆ ಮಾಡಲು ಮಾನ್ಯ ಸಂಸದರು ಮನವಿ ಮಾಡಿದರು.ನೈರುತ್ಯ ರೈಲ್ವೆಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಸಾಧ್ಯವಿರುವಲ್ಲಿ ಶಿಫಾರಸು ಮಾಡುವಂತೆ ತಿಳಿಸಿದ್ಧಾರೆ.