RIPPONPET

ರಿಪ್ಪನ್‌ಪೇಟೆ: ಮನೆಯ ಹಾಲ್​​​ನಲ್ಲೇ ನೇ*ಣಿಗೆ ಶರಣಾದ ಯುವಕ

Prathapa thirthahalli ನವೀಕರಣ: 27 ಮಾರ್ಚ್ 2026, 12:56 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Ripponpete ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ 23 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಶಿವಮೊಗ್ಗ: ಎನ್.ಟಿ ರಸ್ತೆಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು, 

ಮೃತ ಯುವಕನನ್ನು ಕೊಳವಳ್ಳಿ ನಿವಾಸಿ ವೀರಭದ್ರ ಅವರ ಪುತ್ರ ಸುನೀಲ್ (23) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಕೆಲಸ ಮುಗಿಸಿ ಮನೆಗೆ ಮರಳಿದ್ದ ಸುನೀಲ್, ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಸಂಜೆ 5 ಗಂಟೆಗೆ ಮನೆಯಿಂದ ಹೊರಟಿದ್ದನು. ತಡರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ವಾಪಸ್ಸಾಗಿದ್ದನು ಎನ್ನಲಾಗಿದೆ. 

ಮನೆಗೆ ಬಂದಾಗ ಮದ್ಯಪಾನ ಮಾಡಿದ್ದ ಎನ್ನಲಾದ ಸುನೀಲ್, ಮನೆಯ ಹೊರಭಾಗದಲ್ಲಿ ತಂದೆ-ತಾಯಿಯವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ್ದಾನೆ. ತಂದೆ ಮಲಗಲು ಹೋದ ನಂತರ ಸುನೀಲ್ ಮನೆಯೊಳಗೆ ತೆರಳಿದ್ದಾನೆ. ಸ್ವಲ್ಪ ಸಮಯದ ಬಳಿಕ ಅಣ್ಣ ಮತ್ತು ತಾಯಿ ಒಳಗೆ ಹೋಗಿ ನೋಡಿದಾಗ, ಹಾಲಿನ ಕಬ್ಬಿಣದ ರಾಡಿಗೆ ನೈಲಾನ್ ಬೆಡ್‌ಶೀಟ್‌ನಿಂದ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. 
ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

Ripponpete 23-Year-Old Youth Commits Suicide

Ripponpete 23-Year-Old Youth Commits Suicide
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.