ಕಾರಲ್ಲಿ 1 ಲಕ್ಷ ದುಡ್ಡಿಟ್ಟು ಬ್ಯಾಂಕ್​ಗೆ ಹೋಗಿ ಬರುವಷ್ಟರಲ್ಲಿ ಕಾದಿತ್ತು ಶಾಕ್ ! ತೀರ್ಥಹಳ್ಳಿ ಪೇಟೆಯಲ್ಲಿ ಹಾಡಹಗಲೇ ನಡೆದಿದ್ದೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Aug 7, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ  ತೀರ್ಥಹಳ್ಳಿ   ಪಟ್ಟಣದ ಗಾಂಧಿ ಚೌಕದಲ್ಲಿರುವ ಮಾರಿಕಾಂಬಾ ದೇವಸ್ಥಾನದ ಬಳಿ ಕಾರಿನಲ್ಲಿ ಇಟ್ಟಿದ್ದ ಒಂದು ಲಕ್ಷ ರೂಪಾಯಿ ಕಳ್ಳತನವಾಗಿರುವ ಘಟನೆ ನಿನ್ನೆ ನಡೆದಿದೆ.  ಹಗಲು ಹೊತ್ತಿನಲ್ಲಿಯೇ ಈ ಘಟನೆ ನಡೆದಿರುವುದು ವ್ಯಾಪಾರಸ್ಥರಲ್ಲಿ ಇನ್ನಷ್ಟು ಆತಂಕ ಮೂಡಿಸಿದೆ. 

ನಡೆದಿದ್ದೇನು?

ಮುಂಡಿಗೆಮನೆಯ ದೇವರಾಜ್ ಎಂಬುವರು ಕರ್ನಾಟಕ ಬ್ಯಾಂಕ್ ನಲ್ಲಿ 1 ಲಕ್ಷ ರೂ ಹಣವನ್ನು ಡ್ರಾ ಮಾಡಿದ್ದರು. ಅದನ್ನ ಸೇಪ್ಟಿಗೆ ಅಂತಾ ಬ್ಯಾಂಕ್​ನಿಂದ ಹೊರಬಂದು ತಮ್ಮ  ಕಾರಿನಲ್ಲಿ ಇಟ್ಟಿದ್ದಾರೆ. ನಂತರ ಪುನಃ ಬ್ಯಾಂಕ್ ಗೆ ಹೋಗಿ ಪಾಸ್ ಬುಕ್ ಎಂಟ್ರಿ ಮಾಡಿಸಿದ್ದಾರೆ ಅಷ್ಟೆ.  ವಾಪಾಸ್ ಬರುವುದರೊಳಗೆ ದುಷ್ಕರ್ಮಿಗಳು ಕಾರಿನ ಲಾಕ್ ತೆಗೆದು ಹಣವನ್ನು ಕಳ್ಳರು ದೋಚಿ ಎಸ್ಕೇಪ್ ಆಗಿದ್ದಾರೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿ ಕ್ಯಾಮರಾಗಳನ್ನ ಪರಿಶೀಲನೆ ನಡೆಸಿದ್ದಾರೆ. ಇದುವರೆಗೂ ಆರೋಪಿಯ ಸುಳಿವು ಪತ್ತೆಯಾಗಿಲ್ಲ.  

ಇನ್ನಷ್ಟು ಸುದ್ದಿಗಳು 

 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು

 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor