MALENADUTODAY.COM |SHIVAMOGGA| #KANNADANEWSWEB
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರನ ಮೇಲೆ ನಡೆದ ಲೋಕಾಯುಕ್ತ ದಾಳಿಯಲ್ಲಿ ಏಳು ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಆದರೆ ಅವರು ಯಾವ ಹಣ ಇಟ್ಟುಕೊಂಡಿದ್ದರು ಅನ್ನೋದು ನನಗೆ ಗೊತ್ತಿಲ್ಲ, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ ಮಾದ್ಯಮಗಳ ಮೂಲಕ ನನಗೆ ತಿಳಿದಿದೆ. ಈ ವಿಚಾರ ಈಗ ವಿಚಾರಣೆ ಹಂತದಲ್ಲಿದೆ. ಈ ಬಗ್ಗೆ ನಾನು ಈಗಲೇ ಪ್ರತಿಕ್ರಿಯಿಸುವುದಿಲ್ಲ. ನಾಲ್ಕೈದು ಜನರನ್ನು ಅರೆಸ್ಟ್ ಮಾಡಿದ್ದಾರೆ. ಯಾವ ಹಣ ಅವರು ಇಟ್ಟುಕೊಂಡಿದ್ದರು ಎಂದು ತಿಳಿದಿಲ್ಲ. ವಿಚಾರಣೆ ಬಳಿಕ ಈ ಬಗ್ಗೆ ತಿಳಿಯಲಿದೆ ಎಂದಿದ್ದಾರೆ. ಇನ್ನೂ ಸಿದ್ಧರಾಮಯ್ಯನವರು 500 ರೂ.ನೋಟು ನೀಡುವ ಹೇಳಿಕೆ ವಿಡಿಯೋ ವಿಚಾರದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರವರು, ಕೆಲವೊಮ್ಮ ಸಿದ್ದರಾಮಯ್ಯ ಸತ್ಯ ಹೇಳುತ್ತಾರೆ. ಆದರೆ, ಕಾಂಗ್ರೆಸ್ ನ ಸಮಾವೇಶಕ್ಕೆ ಜನರನ್ನು ಹಣ ನೀಡಿ ಕರೆದುಕೊಂಡು ಬರುವುದು ದುರಂತ ಎಂದಿದ್ದಾರೆ.
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #