ಶಿವಮೊಗ್ಗ: ನಗರದ ಆರ್.ಟಿ.ಓ. ಕಚೇರಿ ರಸ್ತೆಯಲ್ಲಿ ಇದ್ದ ಗೂಡಂಗಡಿ ಹಾಗೂ ತಿಂಡಿ ಗಾಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ತೆರವುಗೊಳಿಸಿದ್ದಾರೆ.
ಶಿವಮೊಗ್ಗದ ವಿವಿಧೆಡೆ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ!
ಆರ್.ಟಿ.ಓ. ರಸ್ತೆ ಅಕ್ಕಪಕ್ಕದಲ್ಲಿದ್ದ ಈ ಅಂಗಡಿಗಳಿಂದಾಗಿ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿತ್ತು. ಅಷ್ಟೇ ಅಲ್ಲದೆ, ಈ ಭಾಗದಲ್ಲಿ ನಿತ್ಯ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು. ಈ ಕುರಿತು ಪತ್ರಿಕೆಗಳಲ್ಲಿ ವರದಿಗಳು ಬಿತ್ತರವಾಗಿದ್ದವು ಮತ್ತು ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಪಾಲಿಕೆಗೆ ಸಲ್ಲಿಕೆಯಾಗಿದ್ದವು.
ಇದರಿಂದ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು ಈ ಹಿಂದೆ ತೆರವು ಕಾರ್ಯಾಚರಣೆ ಮಾಡಿದ್ದರು. ಆದರೆ ಅದು ಪೂರ್ಣಪ್ರಮಾಣದಲ್ಲಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು ಸಂಚಾರಿ ಪೊಲೀಸರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ, ಫುಟ್ಪಾತ್ಗಳನ್ನು ಮುಕ್ತಗೊಳಿಸಿದ್ದಾರೆ.
ರಸ್ತೆ ಬದಿಯ ಅತಿಕ್ರಮಣ ತೆರವುಗೊಳಿಸಿರುವುದರಿಂದ ಈಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಂತಾಗಿದೆ.
RTO Road Clearance MCC Removes Illegal Stalls


