ಬೆಂಗಳೂರಿಗೆ ಹೋಗುತ್ತಿದ್ದ ಬಸ್​ ಸಾಗರದ ಐಗಿನಬೈಲ್​ ಬಳಿ ಪಲ್ಟಿ!

Sagar-Bangalore bus incident near Anandpur ಸಾಗರ -ಬೆಂಗಳೂರು ಬಸ್​ ಆನಂದಪುರದ ಬಳಿ ಘಟನೆ

ಬೆಂಗಳೂರಿಗೆ ಹೋಗುತ್ತಿದ್ದ ಬಸ್​ ಸಾಗರದ ಐಗಿನಬೈಲ್​ ಬಳಿ ಪಲ್ಟಿ!

KARNATAKA NEWS/ ONLINE / Malenadu today/ Oct 27, 2023 SHIVAMOGGA NEWS

SAGARA |  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ. 

ಹೇಗಾಯ್ತು ಘಟನೆ

ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​ ಉರುಳಿ ಬಿದ್ದ ಶಬ್ದ ಕೇಳಿ ಸುತ್ತಮುತ್ತಲಿನ ಜನರು ಮನೆಯಿಂದ ಹೊರಬಂದು ಹೆದ್ದಾರಿಯಲ್ಲಿ ನೋಡಿದ್ದಾರೆ. 

ಬಸ್​ ಪಲ್ಟಿಯಾಗಿರುವುದನ್ನ ಗಮನಿಸಿದ ಸ್ಥಳಿಯರು ತಕ್ಷಣವೇ ಸ್ಥಳಕ್ಕೆ ಹೋಗಿ  ಬಸ್​ನಲ್ಲಿದ್ದವರನ್ನ ಹೊರಕ್ಕೆ ಕರೆತಂದು ಆರೈಕೆ ಮಾಡಿದ್ದಾರೆ. ಇನ್ನೂ ಘಟನೆ ವೇಳೆ ಬಸ್​ನಲ್ಲಿ 20 ಜನರು ಪ್ರಯಾಣಿಕರಿದ್ದರು ಎಂದು ಹೇಳಲಾಗುತ್ತಿದೆ. ಈ ಪೈಕಿ ಒಂಬತ್ತು ಮಂದಿಗೆ ಗಾಯಗಳಾಗಿದ್ದು ಅವರನ್ನು ಸಾಗರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಇನ್ನೂ ಆನಂದಪುರ ಪೊಲೀಸ್ ಸ್ಟೇಷನ್​ನಲ್ಲಿ ಪ್ರಕರಣ ದಾಖಲಾಗಿದೆ 


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!