ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ | ಸಾಗರ ಕೋರ್ಟ್‌ ಮಹತ್ವದ ತೀರ್ಪು | ಏನಿದು ವಿಚಾರ

The Sagar Court has given an important judgment regarding the worship of Sree Choudeshwari temple in Sigandurಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಪೂಜೆ ವಿಚಾರವಾಗಿ ಸಾಗರ ಕೋರ್ಟ್ ಮಹತ್ವದ ತೀರ್ಪು ನೀಡಿದೆ

ಸಿಗಂದೂರು  ಶ್ರೀ ಚೌಡೇಶ್ವರಿ ದೇವಸ್ಥಾನ |  ಸಾಗರ ಕೋರ್ಟ್‌ ಮಹತ್ವದ ತೀರ್ಪು |  ಏನಿದು ವಿಚಾರ

KARNATAKA NEWS/ ONLINE / Malenadu today/ Oct 15, 2023 SHIVAMOGGA NEWS

ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರಿನ ಚೌಡೇಶ್ವರಿ ದೇವಿ ಪೂಜೆಗೆ ಸಂಬಂಧಪಟ್ಟಂತೆ ಸಾಗರ ಕೋರ್ಟ್‌ ಮಹತ್ವದ ತೀರ್ಪು ನೀಡಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಎಸ್‌.ಪಿ. ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ.

ಈ ಹಿಂದೆ ಸಿಗಂದೂರು ಚೌಡೇಶ್ವರಿದೇವಿ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪಮತ್ತು ಪ್ರಧಾನ ಅರ್ಚಕ ಎಸ್‌.ಪಿ. ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು, ಪೂಜೆ ಯಾರು ಮಾಡಬೇಕು ಎನ್ನುವುದಕ್ಕೆ ದೇವಸ್ಥಾನದ ಆವರಣದಲ್ಲಿ ಪರಸ್ಪರ ಜಗಳ ನಡೆದು ಪೊಲೀಸರು ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು, 

ಈ ಹಿನ್ನೆಲೆ ದೇವಿಪೂಜೆ ಮಾಡಲು ತಮಗೆ ಅವಕಾಶ ಕಲ್ಪಿಸುವಂತೆ ಪ್ರಧಾನ ಅರ್ಚಕ ಶೇಷಗಿರಿ ಭಟ್‌ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಕೋರ್ಟ್ ಪ್ರಧಾನ ಆರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. 

ಈ ಆದೇಶ ಪ್ರಶ್ನಿಸಿ ಧರ್ಮದರ್ಶಿ ಡಾ.ರಾಮಪ್ಪ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವಾದ- ಪ್ರತಿವಾದ ಆಲಿಸಿ ಹಿಂದಿನ ಆದೇಶದಂತೆ ಪ್ರಧಾನ ಅರ್ಚಕ ಎಸ್. ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ ಮಾಡಿದೆ.


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?