ಸಾಗರ ಮಾರಿಕಾಂಬ ಜಾತ್ರಾ ಮಹೋತ್ಸವ : ವಾಹನ ನಿಲುಗಡೆ ನಿಷೇಧ
Sagar Marikamba Jatra Mahotsava: Ban on parking
MALENADUTODAY.COM | SHIVAMOGGA NEWS |SAGARA TALUK
ಶಿವಮೊಗ್ಗ, ಫೆಬ್ರವರಿ 04 : ಸಾಗರ ನಗರದಲ್ಲಿ ಪ್ರಸಿದ್ಧ ಮಾರಿಕಾಂಬ ಜಾತ್ರಾ ಮಹೋತ್ಸವವು ಫೆ.07 ರಿಂದ ಫೆ.15 ರವರೆಗೆ ನಡೆಯಲಿದ್ದು ವಾಹನ ನಿಲುಗಡೆ ನಿಷೇಧ ಹಾಗೂ ಪಾರ್ಕಿಂಗ್ ವ್ಯವಸ್ಥೆಗಾಗಿ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಇವರು ಈ ಕೆಳಕಂಡಂತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಸಾಗರ ಪೇಟೆ ಪೊಲೀಸ್ ಠಾಣೆ ಎದುರಿನ ಜೆ.ಸಿ ವೃತ್ತದಿಂದ ಜೆ.ಸಿ ರಸ್ತೆ ಮೂಲಕ ಸಾಗರ ಸರ್ಕಲ್ ಮಾರ್ಗವಾಗಿ ಐತಪ್ಪ ವೃತ್ತದವರೆಗೆ ಎರಡೂ ಕಡೆ ಹೋಗಿ ಬರುವ ವಾಹನಗಳನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ವೃತ್ತದಿಂದ ಸಾಗರ ಸರ್ಕಲ್ವರೆಗೆ ವಾಹನ ಸಂಚಾರ ನಿಷೇಧಿಸಿದೆ.
ಸತ್ಯನಾರಾಯಣ ಸ್ವಾಮಿ ದೇವಸ್ಥಾನ ಸರ್ಕಲ್ನಿಂದ ಸಾಗರ ಸರ್ಕಲ್ವರೆಗೆ ವಾಹನ ಸಂಚಾರ ನಿಷೇಧಿಸಿದೆ. ದುರ್ಗಾಂಬ ವೃತ್ತ ಮೂಲಕ ಸೊರಬ ರಸ್ತೆ ಮಾರ್ಕೇಟ್ ರಸ್ತೆ ಮೂಲಕ ಎಸ್,ಎನ್ ವೃತ್ತದವರೆಗೆ ಎಲ್ಲಾ ಮಾದರಿ ವಾಹನ ನಿಲುಗಡೆಯನ್ನು ಮತ್ತು ಎಲ್ಲಾ ಮಾದರಿಯ ಸರಕು ವಾಹನಗಳನ್ನು ನಿಷೇಧಿಸಲಾಗಿದ್ದು ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತು ಪಡಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com