SHIVAMOGGA NEWS TODAY

ಸಾಗರ: 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ದರೋಡೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Sagara ಸಾಗರ : ಸಾಗರ ಪಟ್ಟಣದ ಗಾಂಧಿನಗರದಲ್ಲಿರುವ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಕಳ್ಳರು , ಬರೋಬ್ಬರಿ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ಶಿವಮೊಗ್ಗ: ಮಹಿಳೆಯರು ಸಭೆಗೆ ಹೋಗ್ತಿದ್ದಾಗ ನಡೀತು ಈ ಘಟನೆ, 24 ಗಂಟೆಯಲ್ಲಿ ಇಬ್ಬರ ಬಂಧನ

ಗಾಂಧಿನಗರದ ನಿವಾಸಿ ನಂದನಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ನಂದನಕುಮಾರ್ ಅವರ ಕುಟುಂಬವು ಏಪ್ರಿಲ್ 25 ರಿಂದ ಮನೆಯಲ್ಲಿರಲಿಲ್ಲ. ಈ ಹಿನ್ನೆಲೆ ಕಳ್ಳರು ಮನೆಯ ಮುಂಭಾಗದ ಬೀಗವನ್ನು ಮುರಿದು ಒಳಪ್ರವೇಶಿಸಿದ್ದಾರೆ. ಮನೆಯೊಳಗಿದ್ದ ಬೀರುವನ್ನು ಒಡೆದು ಅದರಲ್ಲಿದ್ದ ಸುಮಾರು ಐದೂವರೆ ಕೆ.ಜಿ. ತೂಕದ ಬೆಳ್ಳಿ ವಸ್ತುಗಳು, 2 ಲಕ್ಷ ರೂಪಾಯಿ ನಗದು ಹಣ, 340 ಗ್ರಾಂ ತೂಕದ ಚಿನ್ನದ ನೆಕ್ಲೇಸ್, ಉಂಗುರಗಳು, ತಾಳಿಸರ ಮತ್ತು ಬಳೆಗಳನ್ನು ಅಪಹರಿಸಿದ್ದಾರೆ. ಕಳುವಾದ ವಸ್ತುಗಳ ಒಟ್ಟು ಅಂದಾಜು ಮೌಲ್ಯ 50 ಲಕ್ಷ ರೂಪಾಯಿಗಳಾಗಬಹುದು ಎಂದು ಅಂದಾಜಿಸಲಾಗಿದೆ.

ನಂದನಕುಮಾರ್ ಅವರ ಕುಟುಂಬದವರು ಮನೆಗೆ ಹಿಂದಿರುಗಿದಾಗ, ಮನೆಯ ಬೀಗ ಮುರಿದಿರುವುದು ಹಾಗೂ ಬೀರುವಿನಲ್ಲಿದ್ದ ಬೆಲೆಬಾಳುವ ವಸ್ತುಗಳು ಕಳವಾಗಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಸಾಗರ ಪೇಟೆ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Sagara 50 Lakh Worth Gold & Cash Stolen 

Sagara 50 Lakh Worth Gold & Cash Stolen 
Sagara 50 Lakh Worth Gold & Cash Stolen 
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.