SHIVAMOGGA NEWS TODAY

ಸಾಗರ: ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಅಡ್ಡೆಗೆ ತಹಶೀಲ್ದಾರ್ ದಿಢೀರ್ ಭೇಟಿ, ಎರಡು ಲಾರಿಗಳು ವಶ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ : ತಾಲೂಕಿನ ಹಿರೇನಲ್ಲೂರು ಗ್ರಾಮದ ವ್ಯಾಪ್ತಿಯಲ್ಲಿ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆಯುತ್ತಿದ್ದ ಜಂಬಿಟ್ಟಿಗೆ (ಕಲ್ಲು) ಕ್ವಾರಿ ಹಾಗೂ ಮರಳು ಸಾಗಾಟದ ಆಡ್ಡೆಯ ಮೇಲೆ ತಹಶೀಲ್ದಾರ್ ಪ್ರತಿಭಾ ಆರ್. ಅವರು ಗುರುವಾರ ದಿಢೀರ್ ದಾಳಿ ನಡೆಸಿದ್ದಾರೆ. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಗ್ರಾಮದ ಸರ್ವೆ ನಂಬರ್ 211ರಲ್ಲಿ ಈ ಅಕ್ರಮ ಜಂಬಿಟ್ಟಿಗೆ ಗಣಿಗಾರಿಕೆ ಹಾಗೂ ಮರಳು ಸಾಗಣೆ ನಿರಂತರವಾಗಿ ನಡೆಯುತ್ತಿದ್ದ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಅಧಿಕಾರಿಗಳ ತಂಡವು ವಶಕ್ಕೆ ಪಡೆದುಕೊಂಡಿದೆ. 

ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸರ್ಕಾರಿ ಜಾಗಗಳಲ್ಲಿ ಆಕ್ರಮವಾಗಿ ಕಲ್ಲು ಗಣಿಗಾರಿಕೆ, ಜಂಬಿಟ್ಟಿಗೆ ಕ್ವಾರಿ ಹಾಗೂ ಮರಳು ಸಾಗಾಣಿಕೆ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಅವರು ಈ ವೇಳೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಾರ್ಯಾಚರಣೆಯ ತಂಡದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ, ಕಂದಾಯ ನಿರೀಕ್ಷಕ ವಿನಾಯಕ್, ಅರಣ್ಯ ಇಲಾಖೆಯ ಸಿಬ್ಬಂದಿ ಮಂಜುನಾಥ್ ಹಾಗೂ ಗ್ರಾಮ ಸಹಾಯಕ ಲೋಕೇಶ್ ಅವರು ಪಾಲ್ಗೊಂಡಿದ್ದರು.

Sagara Tahsildar Raids Illegal Quarry

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.