ಸಾಗರದ ವಿಲಿಯಂ ಮಾಸ್ಟರ್ ಇನ್ನಿಲ್ಲ!

This Article Written by / Malenadu Today / ಮೇ 2, 2023

Puneeth Rajkumar

KARNATAKA NEWS/ ONLINE / Malenadu today/ May 3, 2023 GOOGLE NEWS


ಸಾಗರ/ ಶಿವಮೊಗ್ಗ ಇಲ್ಲಿನ ಸಾಹಿತಿ ವಿಲಿಯಂ ಮಾಸ್ಟರ್​ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಸಾಹಿತ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು, ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನ ಸಹ ಹೊಂದಿದ್ದರು. 

ಓದಿ :  ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ  ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!

ಮೇ 2 ರಾತ್ರಿ ಶಿವಮೊಗ್ಗದಲ್ಲಿ ವಿಲಿಯಂ ಮಾಸ್ಟರ್ ನಿಧನರಾಗಿದ್ದು, ಇವರು ಸಾಗರದ ನೆಹರು ನಗರದ ನಿವಾಸಿಯಾಇದ್ದಾರೆ.  ಶಿವಲಿಂಗಪ್ಪ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದ ವಿಲಿಯಂ ಮಾಸ್ಟರ್​ಗೆ ದೊಡ್ಡ  ಶಿಷ್ಯ ಬಳಗವೇ ಇದೆ.  ಒಡನಾಟ ಸಂಸ್ಥೆಯ ರೂವಾರಿ ಆಗಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿದ್ಧಾರೆ.  

ಓದಿ : BREAKING NEWS /  ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ 

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಖ್ಯಾತ ಸಾಹಿತಿ ಡಾ.ನಾ.ಡಿಸೋಜ ಅವರ ಅತ್ಯಂತ ಆಪ್ತರಾಗಿದ್ದ ವಿಲಿಯಂ ಮಾಸ್ಟರ್​ ನಿಧನಕ್ಕೆ ಹಲವರು ಸಂತಾಪ ಸೂಚಿಸಿದ್ದಾರೆ. 


ಒಂದೇ ಕೇಸ್​ನಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ ಗೊತ್ತಾ?

ಭದ್ರಾವತಿ/ ಶಿವಮೊಗ್ಗ ತನಗಿಂತ 20 ವರ್ಷ ಕಡಿಮೆ ವಯಸ್ಸಿನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ, ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಕೋರ್ಟ್​ ಬರೋಬ್ಬರಿ 20 ವರ್ಷ ಶಿಕ್ಷೆ ವಿಧಿಸಿದೆ. 

ಏನಿದು ಕೇಸ್​

2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬ, 13 ವರ್ಷದ ಅಪ್ರಾಪ್ತೆಗೆ  ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆನಂತರ ಕೇಸ್​ನ ತನಿಖೆ ಕೈಗೊಂಡ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಮಂಜುನಾಥ್​  ಆರೋಪಿ ವಿರುದ್ಧ  ಕೋರ್ಟ್​ ಚಾರ್ಜ್ ಶೀಟ್​ ಸಲ್ಲಿಸಿದ್ರು.  

ಸದ್ಯ ಈ ಕೇಸ್​ನ ವಿಚಾರಣೆ ನಡೆದು  The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ. 

ಏನು ಶಿಕ್ಷೆ ?

ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿಗೆ ಶಿಕ್ಷೆ ವಿಧಿಸಿದ್ದು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ರು. 


Malenadutoday.com Social media

SHIVAMOGGA

ಮುಂದಿನ ಸುದ್ದಿ ಒದಿ

Leave a Comment