#SAVEVISL ವಿಐಎಸ್​ಎಲ್ ಕಾರ್ಖಾನೆ ಬಗ್ಗೆ ಫೆಬ್ರವರಿ 27 ರ ಒಳಗೆ ರಾಜ್ಯ ಸರ್ಕಾರದ ನಿರ್ಧಾರ? ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದೇನು

#SAVEVISL state government's decision on VISL factory by February 27? What did former CM BS Yediyurappa say?

#SAVEVISL ವಿಐಎಸ್​ಎಲ್ ಕಾರ್ಖಾನೆ ಬಗ್ಗೆ ಫೆಬ್ರವರಿ 27 ರ ಒಳಗೆ ರಾಜ್ಯ ಸರ್ಕಾರದ ನಿರ್ಧಾರ? ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದ್ದೇನು

MALENADUTODAY.COM | SHIVAMOGGA NEWS

ಶಿವಮೊಗ್ಗ ಏರ್​ಪೋರ್ಟ್ (SHIVAMOGGA AIRPORT) ಉದ್ಘಾಟನೆ ಕುರಿತಾಗಿ ಮಾತನಾಡ್ತಾ ನಿನ್ನೆ  ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಬಿಜೆಪಿ ಸರ್ಕಾರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತದೆ. ವಿಐಎಸ್​ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗೊಳ್ಳಲಾಗುವುದು ಎಂದಿದ್ದಾರೆ.

ಪ್ರವಾಸಿ ಮಂದಿರದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದ ಅವರು, ಈ ಕುರಿತಾಗಿ  ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಾಗಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ VISL ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ. ಫೆಬ್ರವರಿ 27ರ ಮುನ್ನ ರಾಜ್ಯ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಳ್ಳಲಿದೆ. ಫೆ.27ರಂದು ಏರ್​ಪೋರ್ಟ್ ಉದ್ಘಾಟನೆಗೆ ಪಿಎಂ ಮೋದಿ ಬರುತ್ತಾರೆ ಎಂದು ಹೇಳಿದರು.

ಏರ್​ಫೋರ್ಟ್​ಗೆ ಬಿಎಸ್​ವೈ ಹೆಸರು

ಇನ್ನೂ  ಶಿವಮೊಗ್ಗ ಏರ್​ಪೋರ್ಟ್​​​ಗೆ (Shimoga airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ  ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ. ಬಿಎಸ್​​ವೈ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ (NARENDRA MODI) ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಮಾಡ್ತಾರೆ ಎಂದರು 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com