ಬಿ.ವೈ.ರಾಘವೇಂದ್ರರನ್ನೇ ಗೆಲ್ಲಿಸಿ! ಶಿವಮೊಗ್ಗದಲ್ಲಿ ಕಾಂಗ್ರೆಸ್​ಗೆ ಶಾಕ್​ ನೀಡಿದ ಶಾಮನೂರು ಶಿವಶಂಕರಪ್ಪ !

ಹಂಚಿಕೊಳ್ಳಿ
WhatsApp Facebook X Telegram

SHIVAMOGGA  |  Jan 27, 2024  |   ಮುಂಬರುವ ಸಂಸತ್ ಚುನಾವಣೆಗೆ ಬಿಜೆಪಿ ಈಗಾಗಲೇ ಸಿದ್ದತೆ ಮಾಡಿಕೊಳ್ತಿದೆ. ಅದರಲ್ಲಿಯು ಶಿವಮೊಗ್ಗ ಜಿಲ್ಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮತ್ತೊಂದು ಗೆಲುವಿಗೆ ಅದಾಗಲೇ ತಯಾರಿ ಆರಂಭಿಸಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್​ ಪಕ್ಷ ಕೂಡ ಶಿವಮೊಗ್ಗದಲ್ಲಿ ಈ ಸಲ ಅಭಯ ಹಸ್ತದ ಗೆಲುವು ನೋಡಬೇಕು ಎಂಬ ಮಾತನ್ನು ಆಡುತ್ತಿದೆ. ಈ ನಡುವೆ ಕಾಂಗ್ರೆಸ್​ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಬಿಜೆಪಿಯ ಎಂಪಿ ಬಿ.ವೈ.ರಾಘವೇಂದ್ರರಿಗೆ ಬಹುಪರಾಕ್ ಹೇಳಿದ್ದು ಅವರನ್ನು ಗೆಲ್ಲಿಸುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ 

In Shivamogga,  Akhila Bharatha Veerashaiva Mahasabha president Shamanur Shivashankarappa said that B Y Raghavendra should be re-elected in the parliamentary elections.

ಹೌದು, ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರರನ್ನು ಗೆಲ್ಲಿಸುವಂತೆ ಶಾಮನೂರು ಶಿವಶಂಕರಪ್ಪರವರು ಕರೆಕೊಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ  ಉತ್ತಮ  ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯ ಎಂದು ಅವರು ಹೇಳಿದ್ದಾರೆ. 

ಶಿವಮೊಗ್ಗದಲ್ಲಿ ನಿನ್ನೆ ಬೆಕ್ಕಿನ ಕಲ್ಮಠದಲ್ಲಿ ನಡೆದ ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ಬಿ.ವೈ.ರಾಘವೇಂದ್ರ ಅವರಂತಹ ಲೋಕಸಭ ಸದಸ್ಯರನ್ನುಪಡೆದ ನೀವೇ ಧನ್ಯರು ಎಂದಿದ್ದಾರೆ  

ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಬಿ.ವೈ.ರಾಘವೇಂದ್ರರವರು ಮುನ್ನಡೆಯುತ್ತಿದ್ದಾರೆ. ಅಭಿವೃದ್ಧಿ ಕೆಲಸಕ್ಕೆ ಮೊದಲ ಆದ್ಯತೆ. ಆ ನಿಟ್ಟಿನಲ್ಲಿ  ಜನರ ಅಭಿಲಾಷೆಯಂತೆ ಸಂಸದರು ಕೆಲಸ ಮಾಡಿದ್ದಾರೆ. ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಗೆಲ್ಲಿಸಬೇಕು ಎಂದಿದ್ಧಾರೆ ಸದ್ಯ ಶಾಮನೂರು ಶಿವಶಂಕರಪ್ಪರವರ ಮಾತು ಕಾಂಗ್ರೆಸ್​ನಲ್ಲಿ ಹಲ್​ಚಲ್ ಸೃಷ್ಟಿಸುವ ಸಾಧ್ಯತೆ ಇದೆ.


ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor