ಅರಶಿನ ಗುಂಡಿ ಫಾಲ್ಸ್​ನಲ್ಲಿ ಶರತ್ ಸಾವು! ನೊಂದ ಕುಟುಂಬಸ್ಥರು ಸಂಸದ ಬಿ.ವೈ.ರಾಘವೇಂದ್ರರಿಗೆ ನೀಡಿದ್ರು ಒಂದು ಮನವಿ!

KARNATAKA NEWS/ ONLINE / Malenadu today/ Jul 31, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಶರತ್​ ರವರ ಮೃತದೇಹ ಅರಿಶಿನ ಗುಂಡಿ ಫಾಲ್ಸ್​ನಲ್ಲಿ ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಲೇ ನಿನ್ನೆ ಸಂಸದ ಬಿ.ವೈ.ರಾಘವೇಂದ್ರ (MP B. Y. Raghavendra) ಭದ್ರಾವತಿಯ ಕೆ.ಹೆಚ್​.ನಗರದ ಸುಣ್ಣದಹಳ್ಳಿಯಲ್ಲಿರುವ ಶರತ್​ ರವರ ಮನೆಗೆ ಭೇಟಿಕೊಟ್ಟು ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. 

ಈ ವೇಳೇ, ಸಂಸದರ ಬಳಿಯಲ್ಲಿ ಶರತ್​ ರವರ ತಂದೆ ಮುನಿಸ್ವಾಮಿ ಅಪಾಯಕಾರಿ ಸ್ಥಳಗಳಿಗೆ ಸಾರ್ವಜನಿಕರು ಹೋಗದಂತೆ ನಿಷೇಧ ವಿಧಿಸಿ ಎಂದು ಒತ್ತಾಯಿಸಿದ್ರು. ಅಲ್ಲದೆ ತಮ್ಮ ಮಗನಿಗಾದ ಪರಿಸ್ಥಿತಿ ಮತ್ಯಾರಿಗು ಆಗಬಾರದು ಎಂದು ಮನವಿ ಮಾಡಿದರು. ಇನ್ನೂ ಇದೇ ವೇಳೆ ಸಂಸದರು, ಉಡುಪಿಯ ಅಧಿಕಾರಿಗಳಿಗೆ ಕರೆ ಮಾಡಿ ಆದಷ್ಟು ಬೇಗ ಶರತ್​​ರವರ ಮರಣೋತ್ತರ ಪರೀಕ್ಷೆಯನ್ನು ಮುಗಿಸಿ ಮೃತದೇಹವನ್ನು ರವಾನಿಸುವ ವ್ಯವಸ್ಥೆ ಮಾಡಿ ಎಂದು ಸೂಚಿಸಿದ್ರು. ಸದ್ಯ ಶರತ್​ ರವರ ಮನೆಯಲ್ಲಿ ಕುಟುಂಬದವರ ಆಕ್ರಂಧನ ಮುಗಿಲುಮುಟ್ಟಿದೆ.  


ಮಲ್ನಾಡ್​ನಲ್ಲಿ ಸಿಗದ ನೆಟ್​ವರ್ಕ್​! ಅಧಿಕಾರಿಗಳಿಗೆ ದಿಗ್ಬಂಧನ! ಪರಿಹಾರ ಹುಡುಕಲು ಸಂಸದರ ಮೀಟಿಂಗ್!

ಶಿವಮೊಗ್ಗ:  ಜಿಲ್ಲೆಗೆ ಮಂಜೂರಾಗಿರುವ ಬಿಎಸ್‌ಎನ್‌ಎಲ್ ಟವರ್‌ಗಳನ್ನು ಸರ್ಕಾರಿ ಜಾಗ ಹಾಗೂ ಗ್ರಾಮಗಳ ಸಮೀಪವೇ ನಿರ್ಮಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಈ ಸಂಬಂಧ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ, ಕಂದಾಯ ಇಲಾಖೆ ಹಾಗೂ ಬಿಎಸ್‌ಎನ್‌ಎಲ್ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಕೇಂದ್ರದಿಂದ ಜಿಲ್ಲೆಗೆ ಹೊಸದಾಗಿ 261 ಟವರ್ ಮಂಜೂರು ಆಗಿವೆ.  ತಕ್ಷಣ ಗುರುತಿಸಿರುವ ಸ್ಥಳಗಳಲ್ಲಿ ಟವರ್ ನಿರ್ಮಿಸುವಂತೆ ಸೂಚಿಸಿದರು.

ಕೇಂದ್ರ ಸರ್ಕಾರ ಜಿಲ್ಲೆಗೆ 249 ಹೊಸ ಟವರ್ ನಿರ್ಮಾಣ ಹಾಗೂ 12 ಟವರ್‌ಗಳನ್ನು ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಿದೆ. ಈಗಾಗಲೇ 128 ಟವರ್‌ಗಳ ನಿರ್ಮಾಣಕ್ಕೆ ಸರ್ವೆ ನಡೆಸಿದ್ದು 64 ಟವರ್‌ಗಳು ಕಂದಾಯ ಜಾಗದಲ್ಲಿವೆ. 45 ಟವರ್ ಅರಣ್ಯ ವ್ಯಾಪ್ತಿಯಲ್ಲಿ ಬರುತ್ತಿವೆ. 5 ಕಡೆ ಕಾಮಗಾರಿ ಆರಂಭಗೊಂಡಿದೆ. 

ನೆಟ್​ವರ್ಕ್​ ಪ್ರಾಬ್ಲಮ್​ ಅಧಿಕಾರಿಗೆ ಮುತ್ತಿಗೆ

ಇನ್ನೊಂದೆಡೆ ಸಾಗರ ತಾಲ್ಲೂಕು ಬ್ಯಾಕೋಡು ನಲ್ಲಿ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಇಲ್ಲದೆ ಇದ್ದುದ್ದರಿಂದ  ಗ್ರಾಮಸ್ಥರು ಕಳೆದ  ಶುಕ್ರವಾರ ಬಿಎಸ್​​ಎನ್​ಎಲ್​ ನ ಮೂವರು ನೌಕರರಿಗೆ ದಿಗ್ಬಂಧನ ಹಾಕಿದ್ದರು.  ಈ ಭಾಗದಲ್ಲಿ ವಿದ್ಯುತ್ ಇದ್ದರೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಕಾರ್ಯನಿರ್ವಹಿಸುತ್ತಿರಲಿಲ್ಲ. ಸುಳ್ಳಳ್ಳಿ, ನಾಡಕಚೇರಿ, ಸ್ಥಳೀಯ ಸೊಸೈಟಿ, ಆಸ್ಪತ್ರೆ ಇತರೆಡೆಗಳಲ್ಲಿ ಯಾವುದೇ ಕೆಲಸ ಆಗುತ್ತಿರಲಿಲ್ಲ. ಅಲ್ಲದೆ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೂ ನೋಂದಣಿ ಮಾಡಲು ಆಗುತ್ತಿರಲಿಲ್ಲ. ಎಂದು ನಾಗರಿಕರು ಆಕ್ರೋಶ ಹೊರಹಾಕಿದ್ದರು. 

ಅರಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಭದ್ರಾವತಿ ಶರತ್​ರ ಮೃತದೇಹ ಪತ್ತೆ!

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಿಟ್​ ಆ್ಯಂಡ್​ ರನ್​ ಯುವಕ ಬಲಿ! ಏನಿದು ಘಟನೆ?

SHIVAMOGGA AIRPORT ಗೆ ಸಿಗಲಿದೆ ವಿಶೇಷ ಭದ್ರತೆ! ಗೋವಾ, ತಿರುಪತಿ, ಹೈದ್ರಾಬಾದ್​ಗೂ ಹಾರುತ್ತೆ ವಿಮಾನ! ಟಿಕೆಟ್ ದರದ ಬಗ್ಗೆ ಸಂಸದರು ಹೇಳಿದ್ದೇನು?

 

ಶಿವಮೊಗ್ಗ ಟಿವಿ ಟವರ್ ಗೆ ಎಫ್​ಎಂ ಟ್ರಾನ್ಸ್​ಮೀಟರ್ ಜೋಡಣೆ! ನಗರದಲ್ಲಿಯೇ ಕೇಳಲಿದೆ ಎಫ್​ಎಂ!? ಏನಂದ್ರು ಸಂಸದರು?

ಆರು ಚಿನ್ನದ ಪದಕದ ಜೊತೆಗೆ ರಾಜ್ಯದಲ್ಲಿಯೇ ಫಸ್ಟ್ RANK ಪಡೆದ ಶಿವಮೊಗ್ಗ ಯುವತಿ!

VIRAL TODAY / ಶಾಸಕರ ಬಾಯಿ ರುಚಿ ಮತ್ತು ಬೃಂದಾವನ್​ ಕ್ಯಾಂಟಿನ್​ ಮೆಣಸಿನ ಕಾಯಿ ಬೋಂಡಾ! ವೈರಲ್​ ಆಯ್ತು ಬೇಳೂರು ಹೇಳಿದ ಬಜ್ಜಿ ರೆಸಿಪಿ!

 

SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!

 ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್​ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ

Malenadu Today

 ​ 

 

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು