shikaripura ಪೊಲೀಸರಿಂದ ಹಲ್ಲೆ ಆರೋಪ, ವಿಷ ಕುಡಿದ ಯುವಕ! ಜಾತಿ ಹೆಸರಲ್ಲಿ ನಡೆಯುತ್ತಿದೆಯಾ ನಿಂದನೆ? ಇಷ್ಟಕ್ಕೂ ಶಿಕಾರಿಪುರದಲ್ಲಿ ನಡೆದಿದ್ದು ಏನು?

ಹಂಚಿಕೊಳ್ಳಿ
WhatsApp Facebook X Telegram

ಶಾಲೆಯೊಂದರ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನ ಸದ್ಯ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟರೂ ತೆಗೆದುಕೊಳ್ಳುತ್ತಿಲ್ಲ ಎಂದು ಸಂತ್ರಸ್ತ ಯುವಕನ ಕುಟುಂಬ ಆರೋಪಿಸಿದೆ. 

*BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್*

ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಅರಶಿಣಗೇರಿಯಲ್ಲಿ ಎರಡು ದಿನದ ಹಿಂದೆ ಶಾಲೆಯೊಂದರ ವಾರ್ಷಿಕೋತ್ಸವ ನಡೆಯುತ್ತಿತ್ತು. ಈ ಸಮಾರಂಭವನ್ನು ನೋಡಲು ಸ್ಥಳೀಯ  ನಿವಾಸಿ ಸಚಿನ್ ಹಾಗೂ ಸ್ನೇಹಿತರು ತೆರಳಿದ್ದರು. ಈ ವೇಳೇ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬುದು ಆರೋಪ. ಇನ್ನೂ ಇದೇ ವೇಳೇ ಗ್ರಾಮಸ್ಥರು ಹಲ್ಲೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಇದರ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ನಡುವೆ ಸಚಿನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಊರಿನವರ ಮುಂದೆ ಹೊಡೆದಿದ್ದರಿಂದ ಅವಮಾನ ಆಗಿದೆ ಎಂದು ವಿಷ ಸೇವಿಸಿದ್ದಾಗಿ ಯುವಕ ಹೇಳಿದ್ದಾನೆ. 

TODAY NEWS : ಜನವರಿ 30 ಕ್ಕೆ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ! ಕಾರಣ ಇಲ್ಲಿದೆ! ಇವತ್ತಿನ ಇನ್ನಷ್ಟು ಸುದ್ದಿಗಳು ಇಲ್ಲಿವೆ

*#SAVEVISL : ವಿಐಎಸ್​ಎಲ್​ ಕಾರ್ಖಾನೆಯು ಅಯೋಧ್ಯೆ ಇದ್ದಂತೆ | ಫ್ಯಾಕ್ಟರಿ ಉಳಿಸಲು ಧರಣಿ ಕುಳಿತ ವಿನಯ್ ಗುರೂಜಿ!| ಭದ್ರಾವತಿಯಲ್ಲಿ ಭುಗಿಲೆದ್ದ ಹೋರಾಟ*

ಇನ್ನೂ ಯುವಕನ ಕುಟುಂಬಸ್ಥರು ಇದೇ ರೀತಿ ಈ ಹಿಂದೆಯು ಹಲ್ಲೆ ನಡೆದಿದ್ದು, ತಮ್ಮ ಮೇಲೆ ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗುತ್ತಿದೆ. ಸದ್ಯ ಶಿಕಾರಿಪುರ ಪೊಲೀಸರು ಕಂಪ್ಲೇಂಟ್ ಕೂಡ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೀಳುಜಾತಿ ಎಂದು ನಿಂದಿಸಿ, ತಮ್ಮನ್ನ ಕೀಳಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ದೂರಿದ್ದಾರೆ. 

*Secretary, Ministry of Civil Aviation : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸದೊಂದು ಅಪ್​ಡೇಟ್ಸ್​​ ಇಲ್ಲಿದೆ*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor