SHIVAMOGGA NEWS TODAY

ಶಿಕಾರಿಪುರ : ಮನೆ ಕಳ್ಳತನದ ಆರೋಪಿ ಅಂದರ್​: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ವಶ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shikaripura ಶಿಕಾರಿಪುರ  : ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಕಳವು ಪ್ರಕರಣವೊಂದನ್ನುಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ಮಾಲನ್ನುವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ: ವ್ಯಾಪಾರಿಯ ಗುಜುರಿ ವಸ್ತುವಿಗೆ ಕನ್ನ ಹಾಕ್ತಿದ್ದ ಮಹಿಳಾ ಕಳ್ಳರ ಗ್ಯಾಂಗ್​​: ಪ್ರಕರಣದ ಪತ್ತೆಯಾಗಿದ್ದು ಹೇಗೆ ಗೊತ್ತಾ? 

ಪ್ರಕರಣದ ಹಿನ್ನೆಲೆ

ಶಿಕಾರಿಪುರ ಟೌನ್ ಅರಸುನಗರದ 2ನೇ ಕ್ರಾಸ್ ನಿವಾಸಿಯಾದ ಗೌರಮ್ಮ ಎಂಬುವವರು ಜೂನ್ 4 ರಂದು ಬೆಳಿಗ್ಗೆ 8:30 ರಿಂದ ಸಂಜೆ 5:45 ರ ಅವಧಿಯಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೋಗಿದ್ದರು. ಈ ಸಮಯವನ್ನು ಬಳಸಿಕೊಂಡ ಕಳ್ಳರು, ಅವರ ಮನೆಯ ಬೀರೊನಲ್ಲಿದ್ದ ಲಕ್ಷಾಂತರ ಮೌಲ್ಯದ ಸೊತ್ತನ್ನು ಲೂಟಿ ಮಾಡಿದ್ದರು. ಈ ಬಗ್ಗೆ ಗೌರಮ್ಮ ಅವರು ಜೂನ್ 5 ರಂದು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು. 

ಈ ಹಿನ್ನೆಲೆ ಕಳ್ಳರ ಪತ್ತೆಗಾಗಿ ತಕ್ಷಣವೇ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ತನಿಖೆ ಚುರುಕುಗೊಳಿಸಿದ ಈ ವಿಶೇಷ ತಂಡವು ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಮಾಸೂರು ರಸ್ತೆ ನಿವಾಸಿಯಾದ 47 ವರ್ಷದ ಅಮಿತ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯಿಂದ ಕಳವು ಮಾಡಲಾಗಿದ್ದ 3,14,400 ರೂಪಾಯಿ ಮೌಲ್ಯದ 28 ಗ್ರಾಂ ತೂಕದ ಚಿನ್ನದ ಆಭರಣಗಳು, 26,800 ರೂಪಾಯಿ ಮೌಲ್ಯದ 134 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು ಹಾಗೂ 2 ಲಕ್ಷ ರೂಪಾಯಿ ಹಾರ್ಡ್ ಕ್ಯಾಶ್ ಸೇರಿದಂತೆ ಒಟ್ಟು ಮೊತ್ತವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 

Shikaripura Housebreak Case Solved

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.