SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 1, 2024 | ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿಕಾರಿಪುರ ಪಟ್ಟಣದ ಸಂತೆ ಸಂದರ್ಭದಲ್ಲಿ ಹುಚ್ಚುನಾಯಿ ಒಂದು ಸುಮಾರು 37 ಮಂದಿಗೆ ಕಚ್ಚಿರುವ ಬಗ್ಗೆ ವರದಿಯಾಗಿದೆ.
ಹುಚ್ಚು ನಾಯಿ ಕಡಿತದಿಂದ ಗಾಯಗೊಂಡವರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಇನ್ನೊಂದಡೆ ಹುಚ್ಚು ನಾಯಿಯನ್ನು ಸಾರ್ವಜನಿಕರೇ ಹೊಡೆದು ಕೊಂದು ಹಾಕಿದ್ದಾರೆ.
ಒಂದೇ ದಿನ ನಾಯಿ ಕಡಿತದಿಂದಾಗಿ ಸರ್ಕಾರಿ ಆಸ್ಪತ್ರೆಗೆ ಅತಿಹೆಚ್ಚು ಮಂದಿ ಆಗಮಿಸಿದ್ದಾರೆ. ಇದರಿಂದಾಗಿ ಪ್ರಕರಣ ಅಧಿಕಾರಿಗಳ ಗಮನ ಸೆಳೆದಿದೆ.
ಈ ಸಂಬಂಧ ಮೃತ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸದ್ಯ ಪ್ರಕರಣದ ಸಂಪೂರ್ಣ ಮಾಹಿತಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ.

ಇನ್ನೊಂದಡೆ ಸಾಕು ನಾಯಿಗಳಿಗೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸಬೇಕು ಎಂದು ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.