SHIVAMOGGA NEWS TODAY

ಜುಲೈ 20 ರಂದು ವರಲಕ್ಷ್ಮಿ ಪ್ರಕಾಶ್ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shikaripura ಶಿಕಾರಿಪುರ |  ಶಿಕಾರಿಪುರದ ಶ್ರೀ ಶಾಂತೇಶ್ವರಿ ಮಹಿಳಾ ಪತ್ತಿನ ಸಹಕಾರ ಸಂಘದ 23ನೇ ವರ್ಷದ ವಾರ್ಷಿಕ ಮಹಾಸಭೆಯು ಜುಲೈ 20ರಂದು ಜರುಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಶಾಂತಿನಗರದ ಸಂಘದ ಆವರಣದಲ್ಲಿ ಸರ್ವ ಸದಸ್ಯರ ಈ ಮಹಾಸಭೆ ಆಯೋಜನೆಗೊಂಡಿದ್ದು, ಧಾರ್ಮಿಕ ದತ್ತಿ ಇಲಾಖೆಯ ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯೆಯಾಗಿರುವ ಬಿ. ವರಲಕ್ಷ್ಮಿ ಪ್ರಕಾಶ್ ಅವರು ಉಪನ್ಯಾಸ ನೀಡಲಿದ್ದಾರೆ.

ಜೋಗ ಜಲಪಾತ, ಟ್ರೆಕ್ಕಿಂಗ್ ಹೋಗೋ ಪ್ಲಾನ್ ಇದೆಯಾ? ಶಿವಮೊಗ್ಗ ಜಿಲ್ಲಾಧಿಕಾರಿಗಳ ಈ ಆದೇಶವನ್ನೊಮ್ಮೆ ಓದಿ

ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಹಾಲಿ ಅಧ್ಯಕ್ಷೆಯಾದ ಪದ್ಮಾ ಪರಶುರಾಮ್ ಅವರು ವಹಿಸಿಕೊಳ್ಳಲಿದ್ದಾರೆ. ಇದೇ ವೇಳೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಸಹಕಾರ ಮಹಾಮಂಡಳದ ಉಪಾಧ್ಯಕ್ಷೆಯಾದ ಶಾಂತಲಾ ಭೂಕಾಂತ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಿ.ಎಲ್. ಬಸವರಾಜ್ ಅವರು ಉಪಸ್ಥಿತರಿರಲಿದ್ದಾರೆ.

ಇವರೊಂದಿಗೆ ಬಸವೇಶ್ವರ ಸಹಕಾರಿ ಒಕ್ಕೂಟ ಸಂಘದ ನಿರ್ದೇಶಕರಾದ ಟಿ. ಪರಮೇಶ್ವರಪ್ಪ ಮತ್ತು ಪ್ರಮುಖ ಗಣ್ಯರಾದ ಮಂಗಳ ವಿಶ್ವೇಶ್ವರಯ್ಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭೆಯನ್ನು ಅಲಂಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.