World AI Conference / ಮಲೆನಾಡು ಟುಡೆ ಸುದ್ದಿ / ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಎಐArtificial Intelligence ಜಾಗತಿಕ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದಾರೆ ಎಂಬುದು ಹೆಮ್ಮೆಯ ವಿಷಯ.
ಈ ಬಗ್ಗೆ ಇನ್ನಷ್ಟು ತಿಳಿಯುವುದಾಯ್ತು ಎಂದರೆ, ಎಐ ತಂತ್ರಜ್ಞಾನ ಹಾಗೂ ಅದರ ಪರಿಣಾಮಗಳ ಕುರಿತು ಆಯೋಜಿಸಲಾಗಿರುವ ಪ್ರತಿಷ್ಠಿತ ವಿಶ್ವ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಶಿಕಾರಿಪುರ ಪಟ್ಟಣದ ಅಕ್ಷರ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಅಕ್ಷರ ವಸತಿ ಶಾಲೆಯಲ್ಲಿ ಸಿಐಎಸ್ಸಿಇ (CISCE) ಪಠ್ಯಕ್ರಮದ ಅಡಿಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿ. ಸಂಭ್ರಮ್ ಹಾಗೂ ಧ್ರುವ ಮಲ್ಲಾಡದ ಫೆಬ್ರವರಿ 20 ರವರೆಗೆ ನಡೆಯಲಿರುವ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಷ್ಟೆ ಅಲ್ಲದೆ ಈ ಇಬ್ಬರು ವಿದ್ಯಾರ್ಥಿಗಳು ಎಐ ಆ್ಯಪ್ಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಮತ್ತು ಅವುಗಳ ತಾಂತ್ರಿಕ ಹಿನ್ನೆಲೆ ಏನು ಎಂಬುದರ ಕುರಿತು ವಿಶೇಷವಾದ ಮಾದರಿಯೊಂದನ್ನು ಸ್ವತಃ ರೂಪಿಸಿದ್ದಾರೆ. ದೆಹಲಿಯ ಸಮ್ಮೇಳನದಲ್ಲಿ ಈ ಮಾದರಿಯನ್ನು ಪ್ರದರ್ಶಿಸುವುದರ ಜೊತೆಗೆ, ಕೃತಕ ಬುದ್ಧಿಮತ್ತೆಯ ಕಾರ್ಯವೈಖರಿಯ ಕುರಿತು ವಿಷಯ ಮಂಡನೆಯನ್ನೂ ಮಾಡಲಿದ್ದಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಸಹಪಾಠಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.


