ಶಿಕಾರಿಪುರ: ಜಮೀನಿನ ಖಾತೆ ಮಾಡಿಕೊಡಲು ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು (VA ಲೋಕಾಯುಕ್ತ ಪೊಲೀಸರ ಅತಿಥಿಯಾಗಿದ್ದಾರೆ. ತಾಲೂಕು ಕಚೇರಿಯ ಕಂದಾಯ ಇಲಾಖೆಯ ವಿಠ್ಠಲ ಕೋಲ್ಹರ ಎಂಬುವವರೇ ಭ್ರಷ್ಟಾಚಾರದ ಜಾಲದಲ್ಲಿ ಸಿಲುಕಿದ ಅಧಿಕಾರಿ.

ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ : ಕೆಜಿ ಬೆಳ್ಳಿಗೆ 3.64 ಲಕ್ಷ, 10 ಗ್ರಾಂ ಚಿನ್ನಕ್ಕೆ 1.67 ಲಕ್ಷ
ತಾಲೂಕಿನ ಚಿಕ್ಕಬಂಜೂರು ಗ್ರಾಮದ ನಿವಾಸಿ ಜಕ್ರಿಯಾ ಬೇಗ್ ಎಂಬುವವರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ವಿಎ ವಿಠ್ಠಲ ಕೋಲ್ಹರ ಅವರು ಬರೋಬ್ಬರಿ 4 ಲಕ್ಷ ರೂಪಾಯಿ ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಅಷ್ಟು ದೊಡ್ಡ ಮೊತ್ತ ನೀಡಲು ಇಚ್ಛಿಸದ ಜಕ್ರಿಯಾ ಬೇಗ್ ಅವರು ಕೂಡಲೇ ಲೋಕಾಯುಕ್ತ ಮೆಟ್ಟಿಲೇರಿದ್ದರು.
ಲೋಕಾಯುಕ್ತರ ಮಾರ್ಗದರ್ಶನದಂತೆ ಇಂದು ಮೊದಲ ಕಂತಿನ ರೂಪದಲ್ಲಿ 1 ಲಕ್ಷ ರೂಪಾಯಿ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ವಿಠ್ಠಲ ಕೋಲ್ಹರ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಅವರ ನೇತೃತ್ವದ ತಂಡ ಈ ಮಿಂಚಿನ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದೆ.
Shikaripura VA Vithal Kolhar Arrested by Lokayukta



