ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಹೆಸರು! ಮಹತ್ವದ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
Shimoga airport to be named after BSY, says CM Basavaraj Bommai
MALENADUTODAY.COM | SHIVAMOGGA NEWS
ಶಿವಮೊಗ್ಗ ವಿಮಾನ ನಿಲ್ಧಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿರುವುದು ನಿಕ್ಕಿಯಾಗುತ್ತಿರುವಂತೆಯೇ ನಿಲ್ಧಾಣಕ್ಕೆ ಯಾರ ಹೆಸರನ್ನು ಇಡಬೇಕು ಎಂಬುದು ಸಾಕಷ್ಟು ಚರ್ಚೆಯಾಗಿತ್ತು. ಇವತ್ತು ಈ ಸಂಬಂಧ ಎನ್ಇಎಸ್ ಮೈದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದಾರೆ. ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂದು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಕಳುಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದ್ಧಾರೆ.
SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್ ಕೇಸ್
ಈ ಸಂಬಂಧ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಡಿಯೂರಪ್ಪ ಅವರ ಶ್ರಮದಿಂದಾಗಿ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. 18 ತಿಂಗಳಲ್ಲಿ ವಿಮಾನ ನಿಲ್ದಾಣ ಸಿದ್ಧವಾಗಿರುವುದು ಒಂದು ವಿಶಿಷ್ಟ ದಾಖಲೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಿದೆ ಎಂಧು ತಿಳಿಸಿದ್ದಾರೆ.
ನಿಲ್ಧಾಣಕ್ಕೆ ತಮ್ಮ ಹೆಸರನ್ನ ಇಡುವುದನ್ನ ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿರಾಕರಿಸಿದ್ದರು. ಇದಕ್ಕೂ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಕೆಲಸ ಮಾಡಿದ ನಾಯಕರು ತಮ್ಮ ಹೆಸರು ಇಡುವುದನ್ನ ನಿರಾಕರಿಸ್ತಾರೆ, ಆದರೆ ಅವರನ್ನ ಪ್ರೀತಿ ಪ್ರೀತಿಯಿಂದ ಕಾಣುವ ಜನರ ಒತ್ತಾಸೆಗೆ ಅಂತಹ ನಾಯಕರು ಮಣಿಯುತ್ತಾರೆ ಎಂದಿದ್ಧಾರೆ. ಅಲ್ಲದೆ ಪ್ರಧಾನಿನರೇಂದ್ರ ಮೋದಿಯವರೇ ವಿಮಾನ ನಿಲ್ಧಾಣದ ಹೆಸರನ್ನು ಪ್ರಕಟಿಸಲಿದ್ಧಾರೆ ಎಂದು ತಿಳಿಸಿದರು.
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com