ಸಿದ್ದರಾಮಯ್ಯರಿಗೆ ಗೂಟದ ಕಾರು ಕೊಟ್ಟಿದ್ದು ಬಿಜೆಪಿನಾ? ಕಟ್ಟಿನ ಕಾರು ಬಸ್​ನಿಲ್ದಾಣದಲ್ಲಿ ಸಿಎಂ ಬೋರ್ಡ್​ ಹರಿದವರು ಯಾರು? POLITICS @TODAY

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS 

ಸಿದ್ದರಾಮಯ್ಯರಿಗೆ ಗೂಟದ ಕಾರು

ಸಿಎಂ ಸಿದ್ದರಾಮಯ್ಯರಿಗೆ  ಗೂಟದ ಕಾರನ್ನು ನೀಡಿದ್ದು ಬಿಜೆಪಿ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. ನಿನ್ನೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು,  ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡರು. ಅಲ್ಲದೆ ಈ ಮೈತ್ರಿಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದರು.. 

ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಒಂದೇ ಒಂದು ಸ್ಥಾನವನ್ನು ಕಾಂಗ್ರೆಸ್‌ ಪಡೆಯುವುದಿಲ್ಲ. ಈ ಮೈತ್ರಿಕೂಟದಿಂದ ಕಾಂಗ್ರೆಸ್ ನಾಯಕರಿಗೆ ಹೊಟ್ಟೆನೋವು ಶುರುವಾಗಿದೆ. ಬಿಜೆಪಿ ಕೋಮುವಾದಿ ಪಕ್ಷ ಎಂದು ಟೀಕಿಸುತ್ತಿದ್ದಾರೆ. ಬಿಜೆಪಿ ಯಾವತ್ತೂ ಕೋಮುವಾದಿ ಅಲ್ಲ, ಕಾಂಗ್ರೆಸ್ಸೇತರ ಸರ್ಕಾರ ರಾಜ್ಯದಲ್ಲಿ ಬಂದಾಗ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದರು. ಆಗ ಇದೇ ಸಿದ್ದರಾಮಯ್ಯನವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದು, ಗೂಟದ ಕಾರನ್ನು ನೀಡಿದ್ದು ಬಿಜೆಪಿ,  ಆ ವಿಚಾರವನ್ನು ಅವರು ನೆನಪಿಟ್ಟುಕೊಳ್ಳಬೇಕು ಎಂದು ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.  

 

ಖಾಸಗಿ ಸಾರಿಗೆಗಳಿಗೆ ಪರಿಹಾರ ಇಲ್ಲ

‘ಶಕ್ತಿ’ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸುವುದು ಅಥವಾ ಖಾಸಗಿ ಸಾರಿಗೆಗಳಿಗೆ ಆಗುತ್ತಿರುವ ನಷ್ಟ ತುಂಬಿಕೊಡುವುದು ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಅವರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಬಂದ್ ನಡೆಸಿದೆ.ಈ ಬಗ್ಗೆ ಮಾತನಾಡಿದದ ಸಿದ್ದರಾಮಯ್ಯ ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗುವುದಿಲ್ಲ ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ ಎಂದಿದ್ದಾರೆ. 

ಕಟ್ಟಿನ ಕಾರು ಬೋರ್ಡ್​ ಹರಿದಿದ್ದು ಯಾರು? 

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಾರ್ಗಲ್​ನ ವ್ಯಾಪ್ತಿ ಕಟ್ಟಿನಕಾರು ಬಸ್ ನಿಲ್ದಾಣದಲ್ಲಿ ಕಿಡಿಗೇಡಿಗಳು ಬಸ್​ ನಿಲ್ದಾಣದ ಬೋರ್ಡ್​ ಬ್ಯಾನರ್​​ನ್ನು ದುಷ್ಕರ್ಮಿಗಳು ಹರಿದಿದ್ದಾರೆ.  ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಸಿದ್ದರಾಮಯ್ಯ ಭಾವಚಿತ್ರವಿರುವ ಬ್ಯಾನರ್‌ಗಳನ್ನು ಹರಿದು ಹಾಕಲಾಗಿದೆ. ಇದರು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು ಸ್ಥಳಕ್ಕೆ ಕಾರ್ಗಲ್​ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.  ಬಸ್ ನಿಲ್ದಾಣ ನಿರ್ಮಾಣ ಮಾಡುವ ವಿಚಾರದಲ್ಲಿ ಪರಸ್ಪರ ಚರ್ಚೆಗಳಾಗಿದ್ದು, ಅದರ ಮುಂದುವರಿದ ಭಾಗವಾಗಿ ರಾಜಕೀಯ ವೈಷಮ್ಯದಿಂದ ಕೃತ್ಯವೆಸಗಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.  


 

ಇನ್ನಷ್ಟು ಸುದ್ದಿಗಳು 

 

 


 

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು