SHIMOGA BREAKING | ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ ಎಂದು ಹೇಳಲಾಗುತ್ತಿದೆ. ಇನ್ನೂ ರುದ್ರೇಶ್​ ಎಂಬವರಿಗೆ ಗಂಭೀರ ಗಾಯವಾಗಿದ್ದು, ಅವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ.

SHIMOGA BREAKING |  ಕಲ್ಲಾಪುರದಲ್ಲಿ ಭೀಕರ ಆಕ್ಸಿಡೆಂಟ್​’ | ಸ್ಥಳದಲ್ಲಿಯೇ ಮೂವರ ದುರ್ಮರಣ

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗೂಡ್ಸ್​ ಲಾರಿ ಹಾಗೂ ಬಲೆರೋ ಕಾರು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. 

ಮೂವರ ದುರ್ಮರಣ

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುರ ಬಳಿ ಈ ಘಟನೆ ಸಂಭವಿಸಿದೆ.  ಕೆಎ 17 ಎಂಎ 3581 ನಂಬರ್​ನ ಬಲೆರೋ  ಕೆಎ 27 ಸಿ3924 ನಂಬರ್​ನ  ಗೂಡ್ಸ್ ಲಾರಿ ಡಿಕ್ಕಿ ಯಾಗಿದೆ. ಘಟನೆಯಲ್ಲಿ ದಾವಣಗೆರೆ ಮೂಲದ ಚಾಲಕ ಕಾರ್ತಿಕ್, ವಿವೇಕ್, ಮೋಹನ ಎಂದು ಸಾವನ್ನಪ್ಪಿದ್ಧಾರೆ ಎಂದು ಹೇಳಲಾಗುತ್ತಿದೆ. ಇನ್ನೂ ರುದ್ರೇಶ್​ ಎಂಬವರಿಗೆ ಗಂಭೀರ ಗಾಯವಾಗಿದ್ದು, ಅವರನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರು ದಾವಣಗೆರೆ ಮೂಲದ ವಿದ್ಯಾರ್ಥಿಗಳಾಗಿದ್ದಾರೆ. 

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link