Shimoga city ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ : ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್

Malenadu Today

MALENADUTODAY.COM  |SHIVAMOGGA| #KANNADANEWSWEB

ಶಿವಮೊಗ್ಗ :  2022-23 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿ ಮಾಡಲು ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗ ವತಿಯಿಂದ ವಿಶೇಷ ಕೌಂಟರ್​ ತೆರೆಯಲಾಗಿದೆ. 

READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್

ಮಾ.05 ರ ಭಾನುವಾರದಂದು ನಗರದ ಸಹ್ಯಾದ್ರಿ ಕಾಲೇಜ್ ಎದುರು ವಿದ್ಯಾನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನ ಚಾನಲ್ ಹತ್ತಿರ, ಮಲ್ಲಿಕಾರ್ಜುನ ನಗರ ಗಣಪತಿ ದೇವಸ್ಥಾನದ ಎದುರು 100 ಅಡಿರಸ್ತೆ, ಜಿಲ್ಲಾ ಪಂಚಾಯತ್ ಕಚೇರಿ ಹಿಂಭಾಗ ಎ.ಎನ್.ಕೆ.ರಸ್ತೆ, ಹಾಗೂ ಅಶೋಕನಗರ ನಂದಿನಿ ಬೂತ್ ಪೊಲೀಸ್ ಠಾಣೆ ಹತ್ತಿರ, ಶಿವಮೊಗ್ಗ ಈ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.  
Malenadu Today

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. 

READ | Shivamogga Crime News | ಹೋರಿ ಹಬ್ಬದ ವಿಚಾರಕ್ಕೆ ಪರ ಊರಿನಲ್ಲಿ ಜಗಳ, ಸ್ವಂತಊರಿನಲ್ಲಿ ಹೊಡೆದಾಟ! | ಪತ್ನಿ ಸಹಿ ನಕಲಿ ಮಾಡಿದ ಪತಿ | ಶಿವಮೊಗ್ಗದ ಕ್ರೈಂ ವರದಿಗಳು

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

Share This Article