ಒಂದೇ ಕೇಸ್​ನಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ ಗೊತ್ತಾ?

Malenadu Today

KARNATAKA NEWS/ ONLINE / Malenadu today/ May 3, 2023 GOOGLE NEWS


ಭದ್ರಾವತಿ/ ಶಿವಮೊಗ್ಗ ತನಗಿಂತ 20 ವರ್ಷ ಕಡಿಮೆ ವಯಸ್ಸಿನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ, ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಕೋರ್ಟ್​ ಬರೋಬ್ಬರಿ 20 ವರ್ಷ ಶಿಕ್ಷೆ ವಿಧಿಸಿದೆ. 

READ/ ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ! 

ಏನಿದು ಕೇಸ್​

2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬ, 13 ವರ್ಷದ ಅಪ್ರಾಪ್ತೆಗೆ  ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆನಂತರ ಕೇಸ್​ನ ತನಿಖೆ ಕೈಗೊಂಡ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಮಂಜುನಾಥ್​  ಆರೋಪಿ ವಿರುದ್ಧ  ಕೋರ್ಟ್​ ಚಾರ್ಜ್ ಶೀಟ್​ ಸಲ್ಲಿಸಿದ್ರು.  

ಸದ್ಯ ಈ ಕೇಸ್​ನ ವಿಚಾರಣೆ ನಡೆದು  The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ. 

ಇದನ್ನು ಸಹ ಓದಿ :  ಹೊಸನಗರದಲ್ಲಿ ಪು ನೀತ್​ರ ಚಿತ್ರ ಕಂಡು ಭಾವುಕರಾದ  ಶಿವಣ್ಣ

ಏನು ಶಿಕ್ಷೆ ?

ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿಗೆ ಶಿಕ್ಷೆ ವಿಧಿಸಿದ್ದು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ರು. 


BREAKING NEWS /  ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ 

ಶಿವಮೊಗ್ಗ ಇವತ್ತು ಕೆಎಸ್​ಆರ್​ಟಿಸಿ (ksrtc) ಬಸ್​ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳನ್ನ ಗುತ್ತಿಗೆ ನೀಡಿರುವುದು. ಇನ್ನೂ ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗ ಪ್ರಕಟಣೆಯನ್ನು ಸಹ  ನೀಡಿದೆ. 

ಇದನ್ನು ಸಹ ಓದಿ : ಆಟೋ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಐಜಿಪಿ ತ್ಯಾಗರಾಜನ್​ ರಿಂದ ಸನ್ಮಾನ! ಕಾರಣವೇನು ?

ಏನಿದೆ ಪ್ರಕಟಣೆಯಲ್ಲಿ

ದಿನಾಂಕ:03.05.2023 ರಂದು ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು  ಖಾಸಗಿ ಸಮಾವೇಶಕ್ಕಾಗಿ ಅಂಕೋಲಕ್ಕೆ ಆಗಮಿಸುತ್ತಿದ್ದಾರೆ. ಈ ಕಾರ್ಯಾಕ್ರಮಕ್ಕೆ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 75 ವಾಹನಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.

ಆದುದರಿಂದ ದಿನಾಂಕ:03.05.2023 ರಂದು ಕ.ರಾ.ರ.ಸಾ.ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೋರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 


Malenadutoday.com Social media

Share This Article