SHIVAMOGGA NEWS TODAY

ಗಾಜನೂರು: ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಭೀಕರ ಹತ್ಯೆ 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :  ದುಷ್ಕರ್ಮಿಗಳು ಗಾರೆಮೇಸ್ತ್ರಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಗಾಜನೂರಿನ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದಿದೆ. ಶ್ರೀನಿವಾಸ್ (36) ಕೊಲೆಯಾದ ದುರ್ದೈವಿ.

ಶಿವಮೊಗ್ಗ-ತೀರ್ಥಹಳ್ಳಿ ರಸ್ತೆ ಸಂಚಾರದಲ್ಲಿ ಈ ದಿನ ಮಾರ್ಗ ಬದಲಾವಣೆ: ಯಾವಾಗ, ಏಕೆ..?

ಮೃತ ಶ್ರೀನಿವಾಸ್​  ಕಳೆದು ಒಂದು ವರ್ಷಗಳಿಂದ ಗಾಜನೂರಿನ ಹೊಸಮನೆಯಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇಂದು ಅವರ ಹತ್ಯೆಯಾಗಿದ್ದು,  ಕೃತ್ಯ ಎಸಗಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. 

ವಿಷಯ ತಿಳಿಯುತ್ತಿದ್ದಂತೆಯೇ ತುಂಗಾನಗರ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

Shimoga Crime Man Murdered at Gajanuru 

Shimoga Crime Man Murdered at Gajanuru 
Shimoga Crime Man Murdered at Gajanuru 
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.