SHIVAMOGGA NEWS TODAY

ಅಪರಿಚಿತರು ಮನೆಯಲ್ಲಿ ಕೂಡಿ ಹಾಕಿದ್ದಾರೆ ಅಂತ ಪೊಲೀಸರಿಗೆ ಬಂತು ದೂರು,ಆಮೇಲೆ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga ಶಿವಮೊಗ್ಗ: ಅಪರಿಚಿತ ವ್ಯಕ್ತಿಗಳು ನಮ್ಮನ್ನು ಮನೆಯಲ್ಲಿ ಕೂಡಿ ಹಾಕಿದ್ದಾರೆ ಎಂದು ಆರೋಪಿಸಿ 112 ಪೊಲೀಸ್ ಸಿಬ್ಬಂದಿಗಳಿಗೆ ದೂರು ನೀಡಿರುವ ಘಟನೆ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ: ಮನೆಯ ಪ್ಯಾಸೇಜ್‌ನಲ್ಲಿ ಕಾಣಿಸಿಕೊಂಡ ಅಪರೂಪದ ಮರದ ಹಾವು ರಕ್ಷಣೆ

ಜುಲೈ 14ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿದ್ದರು. ಯಾರೋ ಅಪರಿಚಿತ ವ್ಯಕ್ತಿಗಳು ತಮ್ಮನ್ನು ಮನೆಯ ಹೊರಗಿನಿಂದ ಮನೆಯೊಳಗೆ ಕೂಡಿಹಾಕಿ ಬೀಗ ಹಾಕಿದ್ದಾರೆ  ಎಂದು ಆರೋಪಿಸಿದ್ದರು.

ದೂರುದಾರರಿಂದ ತುರ್ತು ಕರೆ ಬಂದ ತಕ್ಷಣವೇ ಕಾರ್ಯಪ್ರವೃತ್ತರಾದ ಇಆರ್‌ವಿ ಪೊಲೀಸ್ ಸಿಬ್ಬಂದಿಗಳು ತಡಮಾಡದೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ತದನಂತರ ಪೊಲೀಸರು ಸ್ಥಳದಲ್ಲಿ ದೂರುದಾರರನ್ನು ವಿಚಾರಣೆಗೆ ಒಳಪಡಿಸಿದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. 

ವಿಚಾರಣೆ ವೇಳೆ ದೂರುದಾರರು ನಮನೆಯಲ್ಲಿ ಬಾಡಿಗೆಗೆ ವಾಸವಾಗಿರುವುದು ತಿಳಿದುಬಂದಿದೆ. ಮನೆ ಖಾಲಿ ಮಾಡುವ ವಿಚಾರವಾಗಿ ಬಾಡಿಗೆದಾರರು ಹಾಗೂ ಮನೆ ಮಾಲೀಕರ ನಡುವೆ ಜಗಳ ನಡೆದಿತ್ತು. ಈ ಗಲಾಟೆಯ ಹಿನ್ನೆಲೆಯಲ್ಲೇ ಪರಸ್ಪರ ವಿರೋಧ ವ್ಯಕ್ತಪಡಿಸಿ ಹೊರಗಿನಿಂದ ಕೊಠಡಿಗೆ ಬೀಗ ಹಾಕಲಾಗಿತ್ತು ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.