ಶಿವಮೊಗ್ಗ ಲೋಕಸಭಾ ಚುನಾವಣಾ ಅಖಾಡದಲ್ಲಿ ಕೆ. ಅಣ್ಣಾಮಲೈ
Shimoga Lok Sabha Election Arena K. Annamalai
SHIVAMOGGA | MALENADUTODAY NEWS | Apr 23, 2024 Shimoga Lok Sabha Election, K. Annamalai
ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿರುವ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಾಳೆ ಅಂದರೆ ಏಪ್ರಿಲ್ 24 ರಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಶಿವಮೊಗ್ಗಕ್ಕೆ ಬರಲಿದ್ದಾರೆ.
ಭದ್ರಾವತಿಯ ಕನಕ ಮಂಟಪದಲ್ಲಿ ಸಂಜೆ 4.30ಕ್ಕೆ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಸಂಜೆ 6.30ಕ್ಕೆ ಶಿವಮೊಗ್ಗದ ಬಸ್ನಿಲ್ದಾಣ ದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ಜಿಲ್ಲಾ ಘಟಕದ ಮಾಧ್ಯಮ ಪ್ರಮುಖ ಕೆ.ವಿ. ಅಣ್ಣಪ್ಪ ತಿಳಿಸಿದ್ದಾರೆ.