ಬುಕ್ಲಾಪುರ ಸ್ಮಶಾನದಲ್ಲಿ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ | 15 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಟ್ರ್ಯಾಪ್ ! ಏನಿದು ಕೇಸ್

Shimoga Lokayukta police caught an official while accepting bribeಶಿವಮೊಗ್ಗ ಲೋಕಾಯುಕ್ತ ಪೊಲೀಸರು ಅಧಿಕಾರಿಯೊಬ್ಬರು ಲಂಚ ಪಡೆಯುವಾಗ ಹಿಡಿದಿದ್ದಾರೆ

ಬುಕ್ಲಾಪುರ ಸ್ಮಶಾನದಲ್ಲಿ  ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ | 15 ಸಾವಿರ ಲಂಚ ಪಡೆಯುವಾಗ ಅಧಿಕಾರಿ ಟ್ರ್ಯಾಪ್ !  ಏನಿದು ಕೇಸ್

KARNATAKA NEWS/ ONLINE / Malenadu today/ Oct 13, 2023 SHIVAMOGGA NEWS

ಶಿವಮೊಗ್ಗದ  ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ  ಗೋಪಿನಾಥ್  ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದಾರೆ.ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. 

ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್​ ಕೊಡಲು 15 ಸಾವಿರ ರೂಪಾಯಿಗೆ ಗೋಪಿನಾಥ್​ ಬೇಡಿಕೆ ಇಟ್ಟಿದ್ದರಂತೆ. ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ  ದೂರು ದಾಖಲಾಗಿತ್ತು. 

ದೂರಿನನ್ವಯ ಲೋಕಾಯುಕ್ತ ಡಿವೈಎಸ್​ಪಿ ಉಮೇಶ್ ಈಶ್ವರ್ ನಾಯ್ಕ್​ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.ಸ್ಮಶಾನದ ಕಾಮಗಾರಿ ಪರಿಶೀಲಿಸಿ ರಿಪೋರ್ಟ್ ಕೊಡುವ ಸಂಬಂಧ 15 ಸಾವಿರ ರೂಪಾಯಿ ಲಂಚ  ಪಡೆಯುವಾಗಲೇ ಗೋಪಿನಾಥ್​ ನವರನ್ನು ಟ್ರ್ಯಾಪ್ ಮಾಡಿದ್ದಾರೆ. ಪ್ರಕರಣ ಸಂಬಂಧ ಗೋಪಿನಾಥ್ ರನ್ನ ವಶಕ್ಕೆ ಪಡೆಯಲಾಗಿದೆ. 


ಇನ್ನಷ್ಟು ಸುದ್ದಿಗಳು 

  1. ಅಭಯ್ ಪ್ರಕಾಶ್ ಸಸ್ಪೆಂಡ್ ಪೊಲೀಸ್ ಇಲಾಖೆಯ ವೈಫಲ್ಯವೇ? ಹೀಗೆ ಮಾಡುವುದಾದರೆ ಹಲವರು ಅಮಾನತ್ತಲ್ಲಿರಬೇಕಿತ್ತಲ್ಲವೇ? ಯಾವ ತಪ್ಪಿಗೆ ಈ ಶಿಕ್ಷೆ? JP ಬರೆಯುತ್ತಾರೆ

  2. FACEBOOK , INSTAGRAM ಪೋಸ್ಟ್ ಹಾಕಬೇಕಾದರೆ ಹುಷಾರ್! ಬೀಳುತ್ತೆ ಕೇಸ್​! social media monitoring ಮಾಡುತ್ತಿದೆ ಶಿವಮೊಗ್ಗ ಪೊಲೀಸ್ ಇಲಾಖೆ

  3. ಈ ಹಾವು ನಿಮ್ಮ ಕಣ್ಣಿಗೆ ಬಿದ್ದಿತ್ತಾ? ಇದನ್ನ ಏನಂದು ಕರೆಯುತ್ತಾರೆ? ಈ ಹಾವಿನ ಮೈಮೇಲೆ ನೀರು ಇಂಗುತ್ತೆ ಗೊತ್ತಾ?