ಕಾರ್ಮಿಕನ ಆತ್ಮಹತ್ಯೆ/ ಶಿವಮೊಗ್ಗ ಗ್ರಾಮಾಂತರ ಟಿಕೆಟ್ ಆಕಾಂಕ್ಷಿ ಬಂಧನ

Malenadu Today

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲೂಕಿನ ಅರೆಬಿಳಸಿ ಕ್ಯಾಂಪನ ನಿವಾಸಿ ನಾಗರಾಜ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ನಲಾದ, ಸ್ಥಳೀಯ ತೋಟದ ಮಾಲೀಕನನ್ನ ಪೊಲೀಸರು ಬಂಧಿಸಿದ್ದಾರೆ.  

ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ

ನಡೆದಿದ್ದು ಏನು? 

33 ವರ್ಷದ ನಾಗರಾಜ್​ ಎಂಬವರು, ಮಧುಸೂದನ್​ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ತೋಟದ ಮಾಲೀಕ ಮಧುಸೂದನ್​ ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂಬುದು ಆರೋಪ, ಈ ಮಧ್ಯೆ ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ನಾಗರಾಜ್​ನ ಪತ್ನಿ ಆ ನಂತರ ಸಾಂತ್ವನ ಕೇಂದ್ರದಲ್ಲಿ ಪತ್ತೆಯಾಗಿದ್ದರಂತೆ, ಆನಂತರ ಆಕೆಯ ಕುಟುಂಬಸ್ಥರು , ನಾಗರಾಜ್​ನ ಪತ್ನಿಯನ್ನ ತವರಿಗೆ ಕರೆದುಕೊಂಡು ಹೋಗಿದ್ದಾರೆ. 

ಇದನ್ನು ಸಹ ಓದಿ: ಎಷ್ಟೇ ಆದ್ರೂ ನಮ್ ಹುಡುಗ ಎಂದು ಮನ್ನಿಸಬಹುದಿತ್ತಲ್ಲವೇ ಕನ್ನಡ ಮಾಧ್ಯಮ ಲೋಕ..! ನಾವೇ ಮೊದಲು ಎಂದು ಸುದ್ದಿಯಲ್ಲಿ ಜಿದ್ದಿಗೆ ಬಿದ್ದವರಂತೆ ದ್ವೇಷಿಗಳಾದವರು…ನಟ ದರ್ಶನ್ ವಿಚಾರದಲ್ಲಿ ಒಗ್ಗಟ್ಟಿನ ಜಪ ಮಾಡಿದ್ದರ ಹಿಂದಿನ ಗುಟ್ಟೇನು?

ಈ ಮಧ್ಯೆ ನಾಗರಾಜ್​ ತನ್ನ ಪತ್ನಿ ಜೊತೆ ಮಧುಸೂದನ್​ಗೆ ಸಂಬಂಧ ಇದೆ ಎಂದು ಪದೇ ಪದೇ ಜಗಳವಾಡುತ್ತಿದ್ದನಂತೆ. ಅಲ್ಲದೆ ಈ ಸಂಬಂಧ ಹಲವು ಸಹ ರಾಜಿ ಪಂಚಾಯಿತಿಗಳು ನಡೆದಿದ್ದು, ಅದರ ನಡುವೆ ಮಧುಸೂದನ್​ ನಿಂದಿಸಿದ್ದಾರೆ ಎಂದು ದೂರಲಾಗಿದೆ.

ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ

ಇದರ ನಡುವೆ  ಕಳೆದ ಸೋಮವಾರ ನಾಗರಾಜ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ಮಹಜರ್​ ನಡೆಸಿದ ಪೊಲೀಸರಿಗೆ ನಾಗರಾಜ್​ನದ್ದು ಎನ್ನಲಾದ ಡೆತ್​ ನೋಟ್ ಸಿಕ್ಕಿದ್ದು, ಅದರಲ್ಲಿ ಪತ್ನಿ ಮಕ್ಕಳನ್ನು ದೂರ ಮಾಡಿರುವ ಮಧುಸೂದನ್ ತನ್ನ ಸಾವಿಗೆ ನೇರ ಕಾರಣ ಎಂದು ಬರೆಯಲಾಗಿದೆ ಎಂಬುದು ಗೊತ್ತಾಗಿದೆ. ‘

ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​

ಸದ್ಯ ಪ್ರಕರಣ ಸಂಬಂಧ ಹೊಳೆಹೊನ್ನೂರು ಠಾಣೆ ಪೊಲೀಸರು (hole honnur police station) ಮಧುಸೂದನ್​ರನ್ನ ಬಂಧಿಸಿದ್ದು, ಪತ್ರಿಕೆಯೊಂದರ ಪ್ರಕಾರ, ಮಧುಸೂದನ್​ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗಿದೆ. 

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article