SHIVAMOGGA NEWS TODAY

ಶಿವಮೊಗ್ಗ ಬ್ರೇಕಿಂಗ್: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ: ದಾಖಲೆಗಳ ಪರಿಶೀಲನೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲಾ ಕೇಂದ್ರದ ತಹಶೀಲ್ದಾರ್ ಕಾರ್ಯಾಲಯದ ಮೇಲೆ ಇಂದು ಲೋಕಾಯುಕ್ತ ಪೊಲೀಸರ ತಂಡ ಹಠಾತ್ ಭೇಟಿ ನೀಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರ ಆದೇಶದ ಮೇರೆಗೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂದಿರುವ 15 ಅಧಿಕಾರಿಗಳ ತುಕಡಿಯು ತಹಶೀಲ್ದಾರ್ ಕಚೇರಿ ಸೇರಿದಂತೆ ಕಂದಾಯ ನಿರೀಕ್ಷಕರ (R.I) ಕಚೇರಿಗಳಲ್ಲಿನ ನೂರಾರು ಕಡತಗಳನ್ನು ಪರಿಶೀಲನೆಗೆ ಒಳಪಡಿಸಿದೆ.

 ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ನಗರದ ಹೊರವಲಯದ ಗೋವಿಂದಾಪುರದಲ್ಲಿ ಸುಮಾರು 5.36 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡು, ಸಾರ್ವಜನಿಕರಿಗೆ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡುತ್ತಿರುವ ಬೃಹತ್ ಹಗರಣ ನಡೆದಿದೆ ಎನ್ನಲಾದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಈ ಅಕ್ರಮ ದಂಧೆಗಾಗಿ ಅಗಸನವಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸರ್ಕಾರಿ ಜಮೀನಿನಲ್ಲಿ ಸದ್ಯ 33 ತಾತ್ಕಾಲಿಕ ಶೆಡ್ ಹಾಗೂ ಗುಡಿಸಲುಗಳನ್ನು ನಿರ್ಮಿಸಲಾಗಿದ್ದು, ಇವುಗಳಿಗೆ ಕಡತಗಳಲ್ಲಿ ಕೇವಲ ಮೇಲ್ಛಾವಣಿ ಖಾತೆ ಎಂದು ತಿದ್ದುಪಡಿ ಮಾಡಿ, ಆನಂತರ ಅಮಾಯಕ ಜನರಿಗೆ ಸೈಟ್ ಹಂಚಿಕೆ ಮಾಡಿ ಖಾತೆ ಮಾಡಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ ದಂಧೆಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕಚೇರಿಯಿಂದಲೇ ಒಳಗೊಳಗೇ ದಾಖಲೆಗಳನ್ನು ಸಿದ್ಧಪಡಿಸಿಕೊಡಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. 

ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಂದಾಯ ಇಲಾಖೆಯ ಪ್ರತಿಯೊಂದು ಕಡತವನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. ಇದರೊಂದಿಗೆ, ಶಿವಮೊಗ್ಗದ ನವುಲೆ ಬಡಾವಣೆಯಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಕೆರೆ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಕಂದಾಯ ಅಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು, ಅದಕ್ಕೂ ಸಂಬಂಧಿಸಿದ ಮಹತ್ವದ ದಸ್ತಾವೇಜುಗಳನ್ನು ಜಾಲಾಡಲಾಗುತ್ತಿದೆ. ಸದ್ಯ ಕಚೇರಿಯ ಮುಖ್ಯ ದ್ವಾರಗಳನ್ನು ಬಂದ್ ಮಾಡಿ ಲೋಕಾ ಅಧಿಕಾರಿಗಳ ಸುದೀರ್ಘ ಕಾರ್ಯಾಚರಣೆ ಮುಂದುವರಿದಿದೆ.

shimoga Tehsildar Office Rided by Lokayukta

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.