shimoga today shorte news Shimoga | ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ವಿವಿಧ ಅಪರಾಧ ಸುದ್ದಿಗಳ ಸಂಕ್ಷಿಪ್ತ ವಿವರ ನೀಡುವ ಇವತ್ತಿನ ಚಟ್ ಪಟ್ ನ್ಯೂಸ್ ವಿಭಾಗದಲ್ಲಿ ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಗಮನಿಸೋಣ

ತೀರ್ಥಹಳ್ಳಿಯಲ್ಲಿ ಅಡಕೆ ಗೊನೆ ಕಳ್ಳತನ
ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಭಾಗದ ಕೆರೆಬೈಲು ಅಶೋಕ್ ಎಂಬುವವರ ಅಡಿಕೆ ತೋಟದಲ್ಲಿ ಕಟಾವಿಗೆ ಸಿದ್ಧವಾಗಿದ್ದ ಅಡಿಕೆ ಗೊನೆಗಳನ್ನು ಕಳ್ಳರು ಕದ್ದಿದ್ದಾರೆ. 25,000 ರೂಪಾಯಿ ಮೌಲ್ಯದ ಗೊನೆ ಕದ್ದಾರೆ, ಎಂದು ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಜ್ಜವಳ್ಳಿ ಮಕರ ಸಂಕ್ರಾಂತಿ ವೇಳೆ ಪರ್ಸ್ ಹೊಡೆದ್ರು
ಇನ್ನೂ ಬೆಜ್ಜವಳ್ಳಿಯಲ್ಲಿ ನಡೆದ ಮಕರಸಂಕ್ರಮಣ ಜಾತ್ರೆಯ ಸಂದರ್ಭದಲ್ಲಿ ಅಗಸರಕೊಪ್ಪ ನಿವಾಸಿ ನಾಗರಾಜ್ ಎಂಬುವವರ ಜೇಬಿನಿಂದ 7,000 ರೂಪಾಯಿ ನಗದನ್ನು ಅಪರಿಚಿತರು ಪಿಕ್ಪಾಕೆಟ್ ಮಾಡಿದ್ದಾರೆ. ಜಾತ್ರೆಯ ರಶ್ನಲ್ಲಿ ಈ ಘಟನೆ ನಡೆದಿದ್ದು ಮಾಳೂರು ಪೊಲೀಸ್ ಠಾಣೆಯಲ್ಲಿ ಕಂಪ್ಲೆಂಟ್ ಆಗಿದೆ.

ಸೊರಬ ಲಾಡ್ಜ್ನಲ್ಲಿ ನಡೆತಿತ್ತು ಅದು?
ತುಮಕೂರು ಮೂಲದ ಮಹಿಳೆಯೊಬ್ಬರನ್ನು ಕರೆಸಿಕೊಂಡು ಸೊರಬ ತಾಲ್ಲೂಕು ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ರೇಡ್ ಮಾಡಿದ್ದಾರೆ. ಬಳಿಕ ಈ ರೇಡ್ ನಲ್ಲಿ ಪೊಲೀಸರು ಓರ್ವ ಪುರುಷನನ್ನು ವಶಕ್ಕೆ ಪಡೆದಿದ್ದು ಹಾಗೂ ಓರ್ವ ಮಹಿಳೆಯನ್ನು ರಕ್ಷಿಸಿದ್ಧಾರೆ. ಇನ್ನೊಬ್ಬಾತ ಪರಾರಿಯಾಗಿದ್ದು ಆತನಿಗಾಗಿ ಹುಡುಕಾಟ ನಡೆಸ್ತಿದ್ದಾರೆ.
shimoga today shorte news
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
