ಶಿವಮೊಗ್ಗ / ಮಲೆನಾಡು ಟುಡೆ ಸುದ್ದಿ/ ನಗರದ ಕೃಷಿ ಕಾಲೇಜಿನ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನೊಬ್ಬನನ್ನುಇಆರ್ಎಸ್ಎಸ್ 112 ಸಿಬ್ಬಂದಿ ರಕ್ಷಿಸಿದ್ದಾರೆ.

ನಡೆದಿದ್ದೇನು?
ಇಲ್ಲಿಯ ಯುವಕನೊಬ್ಬ ಮರವೊಂದಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಳ್ಳಲು ಮುಂದಾಗಿದ್ದ ಈ ಬಗ್ಗೆ ಸ್ಥಳೀಯರು 112 ಸಹಾಯವಾಣಿಗೆ ಕರೆ ಮಾಡಿದ್ದರು. ಸ್ಥಳಕ್ಕೆ ಮಾಹಿತಿ ಲಭ್ಯವಾದ ತಕ್ಷಣ ಬಂದ ವಿನೋಬನಗರ ಪೊಲೀಸ್ ಠಾಣೆಯ ಎಎಸ್ಐ ಹೇಮಾವತಿ ಹಾಗೂ ಇಆರ್ ವಿ ವಾಹನದ ಚಾಲಕ ಎಹೆಚ್ ಸಿ ಅಣ್ಣಪ್ಪ ಯುವಕನ ರಕ್ಷಣೆಗೆ ಮುಂದಾಗಿದ್ದಾರೆ.
ರಾಜ್ಯ ಬಜೆಟ್, ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದ್ದೇನು
ನೇಣು ಹಾಕಿಕೊಂಡು ಒದ್ದಾಡುತ್ತಿದ್ದ ಯುವಕನನ್ನು ತಕ್ಷಣವೇ ಕೆಳಗಿಳಿಸಿ ಪ್ರಥಮ ಚಿಕಿತ್ಸೆ ಒದಗಿಸುವ ಮೂಲಕ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.
ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಈ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ ಎಂಬುದು ತಿಳಿದುಬಂದಿದ್ದು, ಪೊಲೀಸರು ಆತನಿಗೆ ಸೂಕ್ತ ತಿಳುವಳಿಕೆ ಹಾಗೂ ಬುದ್ಧಿವಾದ ಹೇಳಿ ಕುಟುಂಬಸ್ಥರೊಂದಿಗೆ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದಾರೆ.

Shivamogga 112 Police Rescue Youth Attempting Suicide Near Agri College
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.