SHIVAMOGGA NEWS TODAY

ಶಿವಮೊಗ್ಗ: ಜಂಗಲ್ ಕಟಿಂಗ್ ಮಾಡುವಾಗ ವಿದ್ಯುತ್ ತಗುಲಿ 29 ವರ್ಷದ ಪವರ್‌ಮ್ಯಾನ್ ಸಾವು!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga ಶಿವಮೊಗ್ಗ: ಜಿಲ್ಲಾ ಕೇಂದ್ರದ ಹೊರವಲಯದ ಹರಿಗೆಯಲ್ಲಿ ಲೈನ್‌ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ್ (29) ಎಂಬ ಪವರ್‌ಮ್ಯಾ ನ್ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಲತಃ ಹರಪನಹಳ್ಳಿ ತಾಲೂಕಿನವರಾದ ಇವರು ಶಿವಮೊಗ್ಗದ ಎಂಆರ್‌ಎಸ್ (MRS) ವಸತಿ ಗೃಹದಲ್ಲಿ ವಾಸವಾಗಿದ್ದರು. 

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ಭಾನುವಾರ ಸಂಜೆ ಹರಿಗೆ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ಮೆಸ್ಕಾಂ ಕಚೇರಿಗೆ ದೂರುಗಳು ಬಂದಿದ್ದವು. ದೂರು ಬರುತ್ತಿದ್ದಂತೆ ಪವರ್‌ಮ್ಯಾನ್ ನಾಗರಾಜ್ ಅವರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಧಾವಿಸಿದ್ದರು. ಆ ಸಮಯದಲ್ಲಿ ಲೈನ್‌ಗೆ ವಿದ್ಯುತ್ ಸಂಪರ್ಕ ಪೂರೈಕೆ ಇರಲಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ತಂತಿಗಳಿಗೆ ಅಡ್ಡಲಾಗಿ ಬೆಳೆದಿದ್ದ ಮರದ ಕೊಂಬೆಗಳನ್ನು ಕತ್ತರಿಸುವ (ಜಂಗಲ್ ಕಟಿಂಗ್) ಕೆಲಸಕ್ಕೆ ಮುಂದಾಗಿದ್ದಾರೆ.

ಆದರೆ, ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದ ಸಂದರ್ಭದಲ್ಲಿ ದುರಾದೃಷ್ಟವಶಾತ್ ಹಠಾತ್ತಾಗಿ ವಿದ್ಯುತ್ ಸ್ಪರ್ಶಿಸಿದೆ. ತೀವ್ರವಾಗಿ ವಿದ್ಯುತ್ ಆಘಾತಕ್ಕೊಳಗಾದ ನಾಗರಾಜ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಮೆಸ್ಕಾಂ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Shivamogga 29-Year-Old Powerman Electrocuted 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.