shivamogga airport news : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಾ.ಬಿ.ಆರ್​. ಅಂಬೇಡ್ಕರ್​ರವರ ಹೆಸರಿಡಿ!

shivamogga airport news : some organizations demand the airport be named after the Dr. B.R. Ambedkar

shivamogga airport news : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಾ.ಬಿ.ಆರ್​. ಅಂಬೇಡ್ಕರ್​ರವರ ಹೆಸರಿಡಿ!
shivamogga airport news : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಾ.ಬಿ.ಆರ್​. ಅಂಬೇಡ್ಕರ್​ರವರ ಹೆಸರಿಡಿ!

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರನ್ನು ಇಡಬೇಕು ಎಂಬುದು ಇನ್ನೂ ಸಹ ನಿಕ್ಕಿಯಾಗಿಲ್ಲ. ಇದರ ನಡುವೆ ಹಲವಾರು ಹೆಸರುಗಳು ಏರ್​ಪೋರ್ಟ್​ಗೆ ಇಡಬೇಕು ಎಂಬ ವಿನಂತಿ, ಒತ್ತಾಯ ಮತ್ತು ಆಗ್ರಹಗಳ ರೂಪದಲ್ಲಿ ಕೇಳಿಬಂದಿದೆ. ಇದೀಗ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್​ರವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಒತ್ತಾಯ ಕೇಳಿಬಂದಿದೆ.  ಈ ಸಂಬಂಧ ಕರ್ನಾಟಕ ರಾಜ್ಯ ಚಾಣಕ್ಯ ಸೇನೆ  ಜಿಲ್ಲಾಧಿಕಾರಿ ಕಚೇರಿ ಎದುರು ಅಂಬೇಡ್ಕರ್​ರವರ ಭಾವಚಿತ್ರ ಇರುವ ಫ್ಲೆಕ್ಸ್​ ಧರಿಸಿ ಒತ್ತಾಯಿಸಿದೆ. ಅಲ್ಲದೆ ಸರ್ಕಾರದ ಮುಂದೆ ಕೆಲವೊಂದು ನಿರ್ಧಿಷ್ಟ ಭೇಡಿಕೆಗಳನ್ನು ಇಟ್ಟಿದೆ. 

*hosanagara news : ಕೋರ್ಟ್​ ವ್ಯಾಜ್ಯದ ನಡುವೆ ಪಂಜುರ್ಲಿ ದೈವಕ್ಕಾಗಿ ನಿರ್ಮಿಸಿದ್ದ ಹೊಸ ದೇಗುಲ ಕಟ್ಟಡ ಧ್ವಂಸ*

ವಿಮಾನ ನಿಲ್ದಾಣದ ಎದುರು ಅಂಬೇಡ್ಕರ್ ಅವರ 105 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಬೇಕು.ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ ಪಾರ್ಕಿಂಗ್ ಮತ್ತು ಸ್ಕೂಟರ್ ಪಾರ್ಕಿಂಗ್‌ನ್ನು ಮತ್ತು ಇತರ ಟೆಂಡರ್‌ಗಳನ್ನು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡದವರಿಗೆ, ಶೇ.50 ರಷ್ಟನ್ನು ನಿರುದ್ಯೋಗಿ ಯುವಕ- ಯುವತಿಯರಿಗೆ ನೀಡಬೇಕು.ಕರ್ನಾಟಕ ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ 10-15 ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು ಎಂದು ಒತ್ತಾಯಿಸಿದರು 

riponpete : ಜುಮ್ಮಾ ಮಸೀದಿ ಎದುರು ಮದ್ಯದಂಗಡಿಗೆ ಅಬಕಾರಿ ಇಲಾಖೆ ಗ್ರೀನ್​ ಸಿಗ್ನಲ್​! ರಿಪ್ಪನ್​ಪೇಟೆಯಲ್ಲಿ ಆಕ್ರೋಶ

VISL ಗೇ ಶಾಹಿ ಗಾರ್ಮೆಂಟ್ಸ್​ ಪರ್ಯಾಯವೇ? ಅಪ್ಪ ಕಳ್ಳ-ಮಗ ಸುಳ್ಳ! ಭದ್ರಾವತಿಯಲ್ಲಿ ಸಂಸದರಿಗೆ ಘೇರಾವ್​! ಬಿಜೆಪಿಗೆ ಮುಖಭಂಗ! ಫೆ.3 ಕ್ಕೆ ಹೆಚ್​​ಡಿಕೆ ಎಂಟ್ರಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com