Shivamogga ಶಿವಮೊಗ್ಗ, : ನಗರದ ಗೋಪಾಲಗೌಡ ಬಡಾವಣೆಯಲ್ಲಿ ನಡೆದ ಅಪಘಾತವೊಂದರಲ್ಲಿ ಶಾಲಾ ಬಸ್ ಹರಿದು ಒಂದೂವರೆ ವರ್ಷದ ಹಸುಗೂಸು ಸ್ಥಳದಲ್ಲೇ ಸಾವನ್ನಪ್ಪಿದೆ.
ಏಪ್ರಿಲ್ 1ರಿಂದ ಹೊಸ ಆರ್ಥಿಕ ನಿಯಮಗಳ ಜಾರಿ: ಈ ಬದಲಾವಣೆ ಬಗ್ಗೆ ಗಮನಿಸಿ
ಗೋಪಾಲಗೌಡ ಬಡಾವಣೆಯ ಎ ಬ್ಲಾಕ್ ನಿವಾಸಿ ಮಂಜುನಾಥ್ ಎಂಬುವವರ ಪುತ್ರ ಆರ್ಯನ್ (1 ವರ್ಷ 6 ತಿಂಗಳು) ಮೃತಪಟ್ಟ ದುರ್ದೈವಿ. ಬಡಾವಣೆಯ ಚಂದನ ಪಾರ್ಕ್ ಸಮೀಪ ಈ ಘಟನೆ ಸಂಭವಿಸಿದೆ.
ಘಟನೆಯ ವಿವರ
ಆರ್ಯನ್ನ ಅಣ್ಣನನ್ನು ಶಾಲಾ ಬಸ್ನಿಂದ ಇಳಿಸಿಕೊಳ್ಳಲು ಮನೆಕೆಲಸದಾಕೆ ಬಸ್ ಬಳಿ ಹೋಗಿದ್ದರು. ಈ ವೇಳೆ ಯಾರಿಗೂ ತಿಳಿಯದಂತೆ ಪುಟ್ಟ ಮಗು ಆರ್ಯನ್ ಕೂಡ ಅವರ ಹಿಂದೆಯೇ ಓಡಿ ಬಂದಿದೆ. ಸಹೋದರನನ್ನು ಬಸ್ನಿಂದ ಇಳಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ, ಬಸ್ನ ಮುಂಭಾಗದಲ್ಲಿದ್ದ ಮಗುವನ್ನು ಗಮನಿಸದ ಚಾಲಕ ಬಸ್ ಚಲಾಯಿಸಿದ್ದಾನೆ. ಪರಿಣಾಮ ಚಕ್ರ ಮಗುವಿನ ಮೇಲೆ ಹರಿದಿದೆ.
ಘಟನೆ ನಡೆದ ತಕ್ಷಣ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲೇ ಮಗು ಮೃತಪಟ್ಟಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪಶ್ಚಿಮ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Shivamogga Baby Dies in School Bus Accident
