ಶಿವಮೊಗ್ಗ: ಮನೆ ಮಾಲೀಕ ಮಾಡಿದ ಸಾಲದ ಸುಳಿಗೆ ಸಿಲುಕಿ ಅಮಾಯಕ ಬಾಡಿಗೆದಾರರು ಬೀದಿಗೆ ಬಿದ್ದಿರುವ ಘಟನೆ ನಗರದಬೊಮ್ಮನಕಟ್ಟೆ ಸಿ-ಬ್ಲಾಕ್ ಬಡಾವಣೆಯಲ್ಲಿ ನಡೆದಿದೆ. ಖಾಸಗಿ ಫೈನಾನ್ಸ್ ಸಂಸ್ಥೆಯೊಂದುಪೊಲೀಸರ ನೆರವಿನೊಂದಿಗೆ ಭೋಗ್ಯಕ್ಕೆ ಇದ್ದ ಮಹಿಳೆಯ ಮನೆಯ ಸಾಮಗ್ರಿಗಳನ್ನು ಏಕಾಏಕಿ ರಸ್ತೆಗೆ ಎಸೆಯುವ ಮೂಲಕ ಅಮಾನವೀಯವಾಗಿ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಶಿವಮೊಗ್ಗ, ಅವೈಜ್ಞಾನಿಕ ಹಂಪ್ನಿಂದ ಭೀಕರ ಅಪಘಾತ, ಬೈಕ್ ಸವಾರ ಸಾವು
Shivamogga ಘಟನೆ ವಿವರ
ಮಮತಾ ಎಂಬ ಮಹಿಳೆ ಕುಮಾರ್ ಎಂಬುವವರ ಮನೆಯನ್ನು 4.50 ಲಕ್ಷ ರೂಪಾಯಿಗಳಿಗೆ ಭೋಗ್ಯಕ್ಕೆ ಪಡೆದು ಮಗನೊಂದಿಗೆ ವಾಸವಾಗಿದ್ದರು. ಆದರೆ, ಮಾಲೀಕ ಮನೆಯ ಮೇಲೆ ಖಾಸಗಿ ಫೈನಾನ್ಸ್ನಲ್ಲಿ ಭಾರಿ ಸಾಲ ಮಾಡಿದ್ದು, ಕಳೆದ ಮೂರು ತಿಂಗಳ ಕಂತುಗಳನ್ನು ಬಾಕಿ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಪೊಲೀಸರೊಂದಿಗೆ ಬಂದ ಫೈನಾನ್ಸ್ ಸಿಬ್ಬಂದಿ, ಬಾಡಿಗೆದಾರರ ಸ್ಥಿತಿಯನ್ನು ಲೆಕ್ಕಿಸದೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎನ್ನಲಾಗಿದೆ.
ಮಾಲೀಕ ತನಗೆ ಫೈನಾನ್ಸ್ನಿಂದ ನೋಟಿಸ್ ಬಂದಿದ್ದರೂ ಆ ವಿಷಯವನ್ನು ಭೋಗ್ಯಕ್ಕೆ ಇದ್ದ ಮಹಿಳೆಗೆ ತಿಳಿಸಿರಲಿಲ್ಲ. ಒಂದು ವೇಳೆ ಮುಂಚಿತವಾಗಿಯೇ ಮಾಹಿತಿ ನೀಡಿ ಹಣ ವಾಪಸ್ ನೀಡಿದ್ದರೆ ಅವರು ಮನೆ ಖಾಲಿ ಮಾಡುತ್ತಿದ್ದರು. ಆದರೆ, ಯಾವುದೂ ತಿಳಿಯದ ಮಮತಾ ಅವರು ಇಂದು ಏಕಾಏಕಿ ನಡೆದ ಈ ಘಟನೆಯಿಂದ ಕಂಗಾಲಾಗಿದ್ದಾರೆ.




